Featured

ಇದು ಮೋದಿಗೆ ಅಪ್ಪುಗೆಯಲ್ಲ, ‘ಆಘಾತ’ ; ರಾಹುಲ್‍ ಗೆ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಇದೆ ಎಂದ ಶಿವಸೇನೆ

ಹೊಸದಿಲ್ಲಿ,:  ಶುಕ್ರವಾರ ನಡೆದ ಅವಿಶ್ವಾಸ ನಿರ್ಣಯದ ಮತದಾನದಿಂದ ಹೊರಗುಳಿಯುವ ಮೂಲಕ ಕೇಂದ್ರದಲ್ಲಿ ಆಡಳಿತಾರೂಢ ಎನ್‍ ಡಿಎ ಅಂಗಪಕ್ಷವಾಗಿರುವ ಶಿವಸೇನೆ ಮತ್ತೆ ಬಿಜೆಪಿಗೆ ಮುಜುಗರ ಉಂಟುಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಭಾಷಣ ಮಾಡಿದ ಕೆಲವೇ ಗಂಟೆಗಳಲ್ಲಿ ಶಿವಸೇನೆ ರಾಹುಲ್ ಭಾಷಣವನ್ನು ಶ್ಲಾಘಿಸಿದೆ. ಭಾಷಣದ ಕೊನೆಯಲ್ಲಿ ರಾಹುಲ್, ಪ್ರಧಾನಿ ಮೋದಿಯವರನ್ನು ಆಲಂಗಿಸಿಕೊಂಡ ಕ್ರಮವನ್ನು ಬಿಜೆಪಿ ಹಾಗೂ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಟೀಕಿಸಿದ್ದರು.

“ರಾಹುಲ್‍ಗಾಂಧಿಯವರು ರಿಯಲ್ ಸ್ಕೂಲ್ ಆಫ್ ಪೊಲಿಟಿಕ್ಸ್‍ನಿಂದ ಪದವಿ ಪಡೆದಿದ್ದಾರೆ” ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಬಣ್ಣಿಸಿದರು.

ರಾಜಕೀಯವಾಗಿ ಮಗು ಎಂದು ಇತರ ಎನ್‍ಡಿಎ ಮಿತ್ರಪಕ್ಷಗಳು ರಾಹುಲ್ ಅವರನ್ನು ಕಡೆಗಣಿಸುತ್ತಿದ್ದರೆ, ರಾಹುಲ್‍ ಗೆ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಇದೆ ಎಂದು ಬಹಿರಂಗವಾಗಿ ಹೇಳಿದ ಮೊಟ್ಟಮೊದಲ ವಿರೋಧ ಪಕ್ಷ ಇದಾಗಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲ ರಾಹುಲ್ ಅವರ ಪ್ರಧಾನಿಯಾಗುವ ಮಹತ್ವಾಕಾಂಕ್ಷೆಯನ್ನು ಬಿಜೆಪಿ ಲೇವಡಿ ಮಾಡುತ್ತಿದ್ದರೆ, ಶಿವಸೇನೆ ಅವರ ಬೆಂಬಲಕ್ಕೆ ನಿಂತಿತ್ತು.

ರಾಹುಲ್ ಅವರ ಈ ಅನಿರೀಕ್ಷಿತ ಕ್ರಮ ಮೋದಿಯವರಿಗೂ ಶಾಕ್ ನೀಡಿದೆ. “ಇದು ಮೋದಿಗೆ ಅಪ್ಪುಗೆಯಲ್ಲ; ಆಘಾತ” ಎಂದು ಎದುರಾಳಿಗಳಿಗೆ ರಾವತ್ ಎದುರೇಟು ನಿಡಿದ್ದಾರೆ. ಇದು ನಾಟಕ ಎಂದು ಜನ ಹೇಳುತ್ತಾರೆ. ಆದರೆ ರಾಜಕೀಯದಲ್ಲಿ ನಾಟಕವೂ ಇರುತ್ತದೆ ಎಂದು ರಾವತ್ ಹೇಳಿದ್ದಾರೆ. ಕೊನೆಕ್ಷಣದಲ್ಲಿ ಅವಿಶ್ವಾಸ ನಿರ್ಣಯದಲ್ಲಿ ಭಾಗವಹಿಸುವುದರಿಂದ ದೂರ ಇರುವ ನಿರ್ಧಾರವನ್ನು ಶಿವಸೇನೆ ಪ್ರಕಟಿಸಿತ್ತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago