Featured

ಇದು ವಿಕಸಿತ ಅಲ್ಲ ಭಾರತದ ವಿನಾಶಕಾರಿ ಬಜೆಟ್ : ಸಿಎಂ ಸಿದ್ದರಾಮಯ್ಯ – vishwanews24

ಇದು ವಿಕಸಿತ ಅಲ್ಲ ಭಾರತದ ವಿನಾಶಕಾರಿ ಬಜೆಟ್ : ಸಿಎಂ ಸಿದ್ದರಾಮಯ್ಯ – vishwanews24

ಬೆಂಗಳೂರು: ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್ ಇದಾಗಿದ್ದು, ನಿಜವಾದ ಅರ್ಥದಲ್ಲಿ ಇದು ವಿಕಸಿತ ಅಲ್ಲ ಭಾರತದ ವಿನಾಶಕಾರಿ ಬಜೆಟ್ ಆಗಿದೆ ಎಂದು ಕೇಂದ್ರ ಬಜೆಟ್‌ ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ದೇಶದ ಆರ್ಥಿಕ ಪರಿಸ್ಥಿತಿಯನ್ನು ತಿಳಿಸದೇ ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಇಲ್ಲ. ವಿಕಸಿತ ಭಾರತ ಎಂದು ನರೇಂದ್ರ ಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ ಭಾರತ ಮಾಡುವ ಬಜೆಟ್ ಆಗಿದೆ. ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಬಜೆಟ್‌ ನಲ್ಲಿ ಇಲ್ಲ. ಆದರೆ ನಾವು ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಕೃಷಿಭಾಗ್ಯ ಕಾರ್ಯಕ್ರಮಗಳು ಈ ವರ್ಗದ ಜನರಿಗೆ ಕೊಟ್ಟೆವು” ಎಂದು ಹೇಳಿದ್ದಾರೆ.

ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲಾ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್ ನಲ್ಲಿ ಹೇಳಿಲ್ಲ. ನಿರ್ಮಲಾ ಸೀತಾರಾಮನ್ ಅವರ 6 ನೇ ಬಜೆಟ್ ಇದು. ತೆರಿಗೆಯನ್ನು ಕಾರ್ಪೊರೇಟ್ ಗಳ ಮೇಲಿನ ಪ್ರಮಾಣ ಶೇ.30 ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ ಮತ್ತು ಹೆಚ್ಚಿಸಿದ್ದಾರೆ. ಬಡವರ,ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರೋಧಿ ಬಜೆಟ್ ಆಗಿದ್ದು, ಕೇಂದ್ರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

2004 -14 ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ ಶೇ.13.79 ಇತ್ತು. ಈಗ ಬಜೆಟ್ ಬೆಳವಣಿಗೆ ಶೇ.9.6ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು ಶೇ.9.6 ಗೆ ತಂದಿದ್ದಾರೆ. ಶೇ.4.19 ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರಕಾರದಲ್ಲಿ ಶೇ.11.14 ಇತ್ತು ಎನ್.ಡಿ.ಎ ಕಾಲದಲ್ಲಿ ಶೇ.6.4 ಕ್ಕೆ ಕುಸಿತವಾಗಿದೆ. ಆದ್ದರಿಂದ ಇದು ವಿಕಸಿತವಲ್ಲ. ದೇಶದ ವಿನಾಶಕಾರಿ ಕುಸಿತದ ಬಜೆಟ್ ಎಂದು ಮುಖ್ಯಮಂತ್ರಿ ವ್ಯಾಖ್ಯಾನಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago