ಹಾವೇರಿ: ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಅಪಾರ ನಷ್ಟ ಸಂಭವಿಸಿದ್ದರು ನಯಾ ಪೈಸೆ ಕೂಡ ಕೇಂದ್ರ ಸರ್ಕಾರದಿಂದ ಬಂದಿಲ್ಲ ಹೀಗಾಗಿ ಕಾಂಗ್ರೆಸ್ ಪಕ್ಷ 24 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.
ಹಾವೇರಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಮೇಲೆ ನಮಗೆ ಗೌರವವಿದೆ. ಅವರನ್ನು ಪ್ರಧಾನಿಯವರು ನಡೆಸಿಕೊಳ್ಳುವ ರೀತಿ ಸರಿಯಿಲ್ಲ. ನಮ್ಮ ರಾಜ್ಯದ ಜನತೆಯನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯವರಿಗೆ ಪ್ರಧಾನಿಯವರನ್ನು ಭೇಟಿಯಾಗಲು ಸಮಯಾವಕಾಶ ಸಿಗದೆ ಇರುವುದು ರಾಜ್ಯದ ಜನತೆಗೆ ಮಾಡುವ ಅವಮಾನ ಎಂದರು.
ಬಿಜೆಪಿ ಸರ್ಕಾರ ಬಡವರ ಯೋಜನೆಗಳನ್ನು ನಿಲ್ಲಿಸುತ್ತಿದ್ದು, ತಮ್ಮ ಸ್ವಾರ್ಥಕ್ಕೆ ಜನರನ್ನು ಬಲಿ ಕೊಡುತ್ತಿದ್ದಾರೆ. ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ಜಾರಿಗೊಳಿಸಿದ್ದು, ಇದು ಜನ ವಿರೋಧಿಯಾಗಿದೆ. ಈ ರೀತಿಯಾಗಿ ಎಲ್ಲದಕ್ಕೂ ತೆರಿಗೆ, ಎಲ್ಲದಕ್ಕೂ ಶಿಕ್ಷೆ, ವಿಧಿಸುವ ಮೂಲಕ ಕೇಂದ್ರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…