Featured

ಇದೊಂದು ಫೇಕ್‌‌ ವಿಡಿಯೋ ,ಒಂದು ವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದು ರಾಜೀನಾಮೆ ನೀಡಲು ಹೇಳುತ್ತೇನೆ : ಸಹೋದರನ ಪರ ಬಾಲಚಂದ್ರ ಜಾರಕಿಹೊಳಿ  -Vishwanews24

ಇದೊಂದು ಫೇಕ್‌‌ ವಿಡಿಯೋ ,ಒಂದು ವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದು ರಾಜೀನಾಮೆ ನೀಡಲು ಹೇಳುತ್ತೇನೆ : ಸಹೋದರನ ಪರ ಬಾಲಚಂದ್ರ ಜಾರಕಿಹೊಳಿ  -Vishwanews24

ಬೆಂಗಳೂರು, : “ಸಿಡಿಯಿಂದ ಆನೆಬಲ ಬಂದಿದೆ, ರಾಜೀನಾಮೆ ಕೊಡಲ್ಲ” ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್‌ ಮಾಡಿದ್ದಾರೆ.

“ಸಹೋದರನನ್ನು ರಾಜಕೀಯವಾಗಿ ಕುಗ್ಗಿಸಲು ಈ ರೀತಿಯಾದ ಬಲೆ ಹೆಣೆಯಲಾಗಿದೆ. ಇದೊಂದು ಫೇಕ್‌‌ ವಿಡಿಯೋ ಆಗಿದೆ. ಒಂದುವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದು ರಾಜೀನಾಮೆ ನೀಡಲು ಹೇಳುತ್ತೇನೆ” ಎಂದು ಹೇಳಿದ್ದಾರೆ.

ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು : ಸಿದ್ದರಾಮಯ್ಯ -Vishwanews24

ರಮೇಶ್‌ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯುವ ಬಗ್ಗೆ ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಮೇಶ್‌‌ ಜಾರಕಿಹೊಳಿ ಅವರೊಂದಿಗೆ ನಿಂತಿದ್ದಾರೆ.

“ಅದೊಂದು ಫೇಕ್‌ ವಿಡಿಯೋ ಆಗಿದ್ದು, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಈ ವಿಚಾರವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗಿದೆ” ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ರಾಸಲೀಲೆ : ಸಂತ್ರಸ್ತೆ ಹೇಳಿಕೆಯ ನಂತರವೇ ಎಫ್‍ಐಆರ್ ದಾಖಲು -Vishwanews24

“ಇದು ಸೃಷ್ಟಿ ಮಾಡಿರುವ ನಕಲಿ ಸಿಡಿ ಆಗಿದೆ. ನಾವೆಲ್ಲರೂ ರಮೇಶ್‌ ಜಾರಕಿಹೊಳಿ ಅವರೊಂದಿಗಿದ್ದೇವೆ. ನಕಲಿ ಸಿಡಿಗೋಸ್ಕರ ರಾಜೀನಾಮೆ ನೀಡಿದ್ದೇ ಆದಲ್ಲಿ ಸಚಿವ ಸಂಪುಟವೇ ಖಾಲಿಯಾಗುತ್ತದೆ. ರಮೇಶ್‌ ಜಾರಕಿಹೊಳಿ ಅವರ ಕುಟುಂಬದ ವಿರುದ್ದ ರಾಜಕೀಯವಾದ ಷಡ್ಯಂತ್ರ ರೂಪಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ರಮೇಶ್‌ ಜಾರಕಿಹೊಳಿ ಕುಟುಂಬದ ವಿರುದ್ದ ಕಾಣದ ಶಕ್ತಿಗಳು ಷಡ್ಯಂತ್ರ ಮಾಡುತ್ತಿವೆ. ಸಿಎಂ ಅವರು ಇಂದು ಮಧ್ಯಾಹ್ನವೇ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಲಿದ್ದಾರೆ. ಅವಶ್ಯಕವಿದ್ದಲ್ಲಿ ಸುದ್ದಿಗೋಷ್ಠಿಯನ್ನು ಕೂಡಾ ನಡೆಸಲಿದ್ದಾರೆ. ಬಿಜೆಪಿಯ ಎಲ್ಲಾ ಶಾಸಕರು ರಮೇಶ್‌ ಜಾರಕಿಹೊಳಿ ಅವರ ಬೆಂಬಲವಾಗಿ ಇರುತ್ತೇವೆ. ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ನಾವು ಸುಮ್ಮನೆ ಕುಳಿತರೆ ಆಗುವುದಿಲ್ಲ. ನಾವು ಇದರ ವಿರುದ್ದ ಕಾನೂನು ಹೋರಾಟ ಮಾಡುತ್ತೇವೆ” ಎಂದಿದ್ದಾರೆ.

ಮನೆಯಲ್ಲೇ ಲಸಿಕೆ ಪಡೆದ ಸಚಿವ ಬಿ.ಸಿ ಪಾಟೀಲ್, : ಜಿಲ್ಲಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗೆ ನೋಟೀಸ್ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

4 hours ago