ಶಿರ್ವ: ಇನ್ನಂಜೆ ಗ್ರಾಪಂ ವ್ಯಾಪ್ತಿಯ ಮರ್ಕೋಡಿ ಎಂಬಲ್ಲಿ ಹೊಳೆ ಬದಿಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಮನೆಯ ತ್ಯಾಜ್ಯವನ್ನು ಬಾಡಿಗೆ ವಾಹನದಲ್ಲಿ ತಂದು ಸುರಿದು ಹೋಗಿರುವ ಬಗ್ಗೆ ಸ್ಥಳೀಯರು ಗ್ರಾಪಂ ಗಮನಕ್ಕೆ ತಂದಿದ್ದು, ಗ್ರಾಪಂ ಅಧ್ಯಕ್ಷೆ ಮಾಲಿನಿ ಶೆಟ್ಟಿ ಸಹಿತ ಆ ಭಾಗದ ವಾರ್ಡ್ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಎಸೆದ ಕಸದಲ್ಲಿದ್ದ ಕಾಗದ, ಪಾರ್ಸೆಲ್ಗಳ ಮೇಲಿನ ವಿಳಾಸ ಹಾಗೂ ಮೊಬೈಲ್ ನಂಬರ್ಗೆ ಕರೆ ಮಾಡಿದರು.
ಕಸ ಎಸೆದ ಕಟಪಾಡಿ ಮೂಲದ ಮನೆಯ ಮಾಲಿಕರನ್ನು ಪತ್ತೆ ಹಚ್ಚಿ, ಈ ಬಗ್ಗೆ ಕಾಪು ಪೋಲಿಸ್ ಠಾಣೆಗೆ ಗ್ರಾಪಂ ಅಧ್ಯಕ್ಷರು ದೂರು ನೀಡಿದರು. ಸಂಜೆಯ ವೇಳೆಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿ, ವಾಹನಕ್ಕೆ ತುಂಬಿಸಿ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಲಾಯಿತು. ಎಸೆದ ತ್ಯಾಜ್ಯದಲ್ಲಿ ಪ್ಲಾಸ್ಟಿಕ್ ಲಕೋಟೆಗಳು, ಮನೆಯ ಕಸ, ಬಿಯರ್ ಬಾಟಲ್, ಹೆಣ್ಣುಮಕ್ಕಳ ಒಳ ಉಡುಪು ಸಹಿತ ಇನ್ನಿತರ ವಸುತಿಗಳಿದ್ದವು.
ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಪಂ ಸದಸ್ಯರಾದ ನಿಕೇಶ್, ದ್ವಿವೇಶ್ ಕಾಪು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳೀಯ ಸಮಾಜ ಸೇವಕರಾದ ಉಮೇಶ್ ಅಂಚನ್, ವರುಣ್ ಶೆಟ್ಟಿ, ರಮೇಶ್ ಮೊದಲಾದವರು ಹಾಜರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…