Featured

ಇನ್ನಂಜೆ: ಹೊಳೆ ಬದಿಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿದ ಗ್ರಾಪಂ ಅಧ್ಯಕ್ಷೆ – vishwanews24

ಇನ್ನಂಜೆ: ಹೊಳೆ ಬದಿಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿದ ಗ್ರಾಪಂ ಅಧ್ಯಕ್ಷೆ

ಶಿರ್ವ: ಇನ್ನಂಜೆ ಗ್ರಾಪಂ ವ್ಯಾಪ್ತಿಯ ಮರ್ಕೋಡಿ ಎಂಬಲ್ಲಿ ಹೊಳೆ ಬದಿಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಮನೆಯ ತ್ಯಾಜ್ಯವನ್ನು ಬಾಡಿಗೆ ವಾಹನದಲ್ಲಿ ತಂದು ಸುರಿದು ಹೋಗಿರುವ ಬಗ್ಗೆ ಸ್ಥಳೀಯರು ಗ್ರಾಪಂ ಗಮನಕ್ಕೆ ತಂದಿದ್ದು, ಗ್ರಾಪಂ ಅಧ್ಯಕ್ಷೆ ಮಾಲಿನಿ ಶೆಟ್ಟಿ ಸಹಿತ ಆ ಭಾಗದ ವಾರ್ಡ್ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಎಸೆದ ಕಸದಲ್ಲಿದ್ದ ಕಾಗದ, ಪಾರ್ಸೆಲ್‌ಗಳ ಮೇಲಿನ ವಿಳಾಸ ಹಾಗೂ ಮೊಬೈಲ್ ನಂಬರ್‌ಗೆ ಕರೆ ಮಾಡಿದರು.

ಕಸ ಎಸೆದ ಕಟಪಾಡಿ ಮೂಲದ ಮನೆಯ ಮಾಲಿಕರನ್ನು ಪತ್ತೆ ಹಚ್ಚಿ, ಈ ಬಗ್ಗೆ ಕಾಪು ಪೋಲಿಸ್ ಠಾಣೆಗೆ ಗ್ರಾಪಂ ಅಧ್ಯಕ್ಷರು ದೂರು ನೀಡಿದರು. ಸಂಜೆಯ ವೇಳೆಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿ, ವಾಹನಕ್ಕೆ ತುಂಬಿಸಿ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಲಾಯಿತು. ಎಸೆದ ತ್ಯಾಜ್ಯದಲ್ಲಿ ಪ್ಲಾಸ್ಟಿಕ್ ಲಕೋಟೆಗಳು, ಮನೆಯ ಕಸ, ಬಿಯರ್ ಬಾಟಲ್, ಹೆಣ್ಣುಮಕ್ಕಳ ಒಳ ಉಡುಪು ಸಹಿತ ಇನ್ನಿತರ ವಸುತಿಗಳಿದ್ದವು.

ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಪಂ ಸದಸ್ಯರಾದ ನಿಕೇಶ್, ದ್ವಿವೇಶ್ ಕಾಪು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳೀಯ ಸಮಾಜ ಸೇವಕರಾದ ಉಮೇಶ್ ಅಂಚನ್, ವರುಣ್ ಶೆಟ್ಟಿ, ರಮೇಶ್ ಮೊದಲಾದವರು ಹಾಜರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago