Featured

ಇನ್ನಂಜೆ: ಹೊಳೆ ಬದಿಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿದ ಗ್ರಾಪಂ ಅಧ್ಯಕ್ಷೆ – vishwanews24

ಇನ್ನಂಜೆ: ಹೊಳೆ ಬದಿಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿದ ಗ್ರಾಪಂ ಅಧ್ಯಕ್ಷೆ

ಶಿರ್ವ: ಇನ್ನಂಜೆ ಗ್ರಾಪಂ ವ್ಯಾಪ್ತಿಯ ಮರ್ಕೋಡಿ ಎಂಬಲ್ಲಿ ಹೊಳೆ ಬದಿಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಮನೆಯ ತ್ಯಾಜ್ಯವನ್ನು ಬಾಡಿಗೆ ವಾಹನದಲ್ಲಿ ತಂದು ಸುರಿದು ಹೋಗಿರುವ ಬಗ್ಗೆ ಸ್ಥಳೀಯರು ಗ್ರಾಪಂ ಗಮನಕ್ಕೆ ತಂದಿದ್ದು, ಗ್ರಾಪಂ ಅಧ್ಯಕ್ಷೆ ಮಾಲಿನಿ ಶೆಟ್ಟಿ ಸಹಿತ ಆ ಭಾಗದ ವಾರ್ಡ್ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಎಸೆದ ಕಸದಲ್ಲಿದ್ದ ಕಾಗದ, ಪಾರ್ಸೆಲ್‌ಗಳ ಮೇಲಿನ ವಿಳಾಸ ಹಾಗೂ ಮೊಬೈಲ್ ನಂಬರ್‌ಗೆ ಕರೆ ಮಾಡಿದರು.

ಕಸ ಎಸೆದ ಕಟಪಾಡಿ ಮೂಲದ ಮನೆಯ ಮಾಲಿಕರನ್ನು ಪತ್ತೆ ಹಚ್ಚಿ, ಈ ಬಗ್ಗೆ ಕಾಪು ಪೋಲಿಸ್ ಠಾಣೆಗೆ ಗ್ರಾಪಂ ಅಧ್ಯಕ್ಷರು ದೂರು ನೀಡಿದರು. ಸಂಜೆಯ ವೇಳೆಗೆ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿ, ವಾಹನಕ್ಕೆ ತುಂಬಿಸಿ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಲಾಯಿತು. ಎಸೆದ ತ್ಯಾಜ್ಯದಲ್ಲಿ ಪ್ಲಾಸ್ಟಿಕ್ ಲಕೋಟೆಗಳು, ಮನೆಯ ಕಸ, ಬಿಯರ್ ಬಾಟಲ್, ಹೆಣ್ಣುಮಕ್ಕಳ ಒಳ ಉಡುಪು ಸಹಿತ ಇನ್ನಿತರ ವಸುತಿಗಳಿದ್ದವು.

ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಪಂ ಸದಸ್ಯರಾದ ನಿಕೇಶ್, ದ್ವಿವೇಶ್ ಕಾಪು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳೀಯ ಸಮಾಜ ಸೇವಕರಾದ ಉಮೇಶ್ ಅಂಚನ್, ವರುಣ್ ಶೆಟ್ಟಿ, ರಮೇಶ್ ಮೊದಲಾದವರು ಹಾಜರಿದ್ದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

42 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago