ನವದೆಹಲಿ: ‘ಕಣಿವೆ ರಾಜ್ಯದ ಜನರು ಶಾಂತಿ ಅನುಭವಿಸಿಲ್ಲ. ಇನ್ನಾದರೂ ಮನಸ್ಸು ಬದಲಿಸಿ. ಬಂದೂಕು ಕೆಳಗಿಡಿ, ಶಾಂತಿಯನ್ನು ಅಪ್ಪಿಕೊಳ್ಳಿ’ ಎಂದು ಭೂಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮನವಿ ಮಾಡಿದ್ದಾರೆ.
‘ಹಿಂದೂಸ್ತಾನ್ ಟೈಮ್ಸ್’ಗೆ ವಿಶೇಷ ಸಂದರ್ಶನ ನೀಡಿರುವ ರಾವತ್, 30 ವರ್ಷ ರಕ್ತ ಸುರಿಸಿ ಸಾಧಿಸಿದ್ದಾದರೂ ಏನು? ಇನ್ನಾದರೂ ಶಾಂತಿಯುತ ಬದುಕಿಗೆ ಮರಳಿ ಬನ್ನಿ ಎಂದು ವಿನಂತಿಸಿದ್ದಾರೆ.
ಸಂವಿಧಾನದ 370ನೇ ವಿಧಿ ರದ್ದತಿ ನಿರ್ಧಾರ ಮತ್ತು ಅದನ್ನು ಘೋಷಿಸಲು ಆರಿಸಿಕೊಂಡ ಸಮಯದ ಬಗ್ಗೆ ಕೇಂದ್ರ ಸರ್ಕಾರವನ್ನು ಶ್ಲಾಘಿಸಿರುವ ಅವರು, ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದಿದ್ದಾರೆ.
‘ಪಾಕಿಸ್ತಾನವನ್ನು ಆರ್ಥಿಕ ಕಾರ್ಯಪಡೆಯು ಕಪ್ಪುಪಟ್ಟಿಗೆ ಸೇರಿಸಿದರೆ, ಆ ದೇಶವು ಒಂದು ರೀತಿಯಲ್ಲಿ ದಿಗ್ಬಂಧನ ಅನುಭವಿಸುವ ಸ್ಥಿತಿ ತಲುಪುತ್ತದೆ. ಈಗ ಪಾಕಿಸ್ತಾನವು ಉಗ್ರಗಾಮಿ ಸಂಘಗಳ ವಿರುದ್ಧ ಏನಾದರೂ ಮಾಡಲೇಬೇಕಾದ ಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಕ್ರಮ ಮಹತ್ವ ಪಡೆದುಕೊಳ್ಳುತ್ತದೆ’ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.
‘ಈ ಬಾರಿ ನಾವು ಉಗ್ರಗಾಮಿಗಳಿಗೂ ಶಾಂತಿಯುತ ಜೀವನಕ್ಕೆ ಮರಳಿಬರಲು ಅವಕಾಶ ಕೊಡುತ್ತಿದ್ದೇವೆ. ಅವರ ಬೆನ್ನಟ್ಟುತ್ತಿಲ್ಲ, ತಪಾಸಣೆ ಮತ್ತು ಗುಂಡಿನ ಚಕಮಕಿಗಳೂ ಕಡಿಮೆಯಾಗಿವೆ. ಯಾರದೋ ಮಾತು ಕೇಳಿ ಬದುಕು ಹಾಳುಮಾಡಿಕೊಳ್ಳಬೇಡಿ. ಸಿಕ್ಕಿರುವ ಅವಕಾಶ ಸದುಪಯೋಗಪಡಿಸಿಕೊಳ್ಳಿ. ಬಂದೂಕು ಕೆಳಗಿಡಿ’ ಎಂದು ಕಿವಿಮಾತು ಹೇಳಿದ್ದಾರೆ.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…