Featured

ಇನ್ನಾ ಗ್ರಾಮಸ್ಥರ ತೀವ್ರ ವಿರೋಧ – ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆ  – vishwanews24

ಇನ್ನಾ ಗ್ರಾಮಸ್ಥರ ತೀವ್ರ ವಿರೋಧ – ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆ

ಬೆಳ್ಮಣ್‌: ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಅವರ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ಗುರುವಾರ ನೀಡಿದೆ.

ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು ಇನ್ನಾ ಗ್ರಾಮದಲ್ಲಿ ಟವರ್‌ ನಿರ್ಮಾಣಕ್ಕೆ ಹಲವು ಸಮಯದಿಂದ ಸರ್ವೇ ಕಾರ್ಯ ನಡೆಯುತ್ತಿತ್ತು. ಟವರ್‌ ನಿರ್ಮಾಣದಿಂದ ಕೃಷಿ ಭೂಮಿ ನಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಗ್ರಾಮಸ್ಥರಿಂದ ಸಾಕಷ್ಟು ಹೋರಾಟ, ಮಾತಿನ ಚಕಮಕಿ ನಡೆದಿತ್ತು. ಆದರೆ ಕಾಮಗಾರಿಯನ್ನು ಗುತ್ತಿಗೆದಾರ ಸಂಸ್ಥೆಯು ಪೊಲೀಸ್‌ ಭದ್ರತೆಯಲ್ಲಿ ಬುಧವಾರ ಜೆಸಿಬಿ ಮೂಲಕ ಬೃಹತ್‌ ಹೊಂಡಗಳನ್ನು ನಿರ್ಮಿಸಿ ಕಾಮಗಾರಿಗೆ ಆರಂಭಿಸಿತ್ತು. ಗುರುವಾರವೂ ಕಾಮಗಾರಿ ಆರಂಭವಾದಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರೂ ಜಿಲ್ಲಾಧಿಕಾರಿಗಳ ಆದೇಶವಿದೆ ಎಂದು ಹೇಳಿ ಕಂಪೆನಿಯ ಸಿಬಂದಿ ಪೊಲೀಸರ ಸಹಕಾರದಲ್ಲಿ ಕಾಮಗಾರಿ ನಡೆಸಿದರು. ಮಧ್ಯಾಹ್ನದ ವೇಳೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯನ್ನು ನೀಡಿದ ಹಿನೆ‌°ಲೆಯಲ್ಲಿ ಕಾಮಗಾರಿ ಸ್ಥಗಿತವಾಗಿದೆ.

ಸ್ಥಳಕ್ಕೆ ಇನ್ನಾ ಗ್ರಾಮಕರಣಿಕ ಹಣಮಂತ, ಜಿ.ಪಂ. ಮಾಜಿ ಸದಸ್ಯೆ ರೇಷ್ಮಾ ಉದಯ್‌ ಶೆಟ್ಟಿ, ಗ್ರಾ.ಪಂ. ಸದಸ್ಯ ದೀಪಕ್‌ ಕೋಟ್ಯಾನ್‌, ಚಂದ್ರಹಾಸ್‌ ಶೆಟ್ಟಿ, ಗ್ರಾಮಸ್ಥರಾದ ಅಮರನಾಥ್‌ ಶೆಟ್ಟಿ, ಪ್ರವೀಣ್‌ ಶೆಟ್ಟಿ ಭೇಟಿ ನೀಡಿದ್ದರು.

ಟವರ್‌ ನಿರ್ಮಾಣದಿಂದ ಫ‌ಲವತ್ತಾದ ಕೃಷಿ ಭೂಮಿಗೆ ಅಪಾರ ಹಾನಿಯಾಗುತ್ತಿದೆ. ಯಾವುದೇ ಅಧಿಕಾರಿಗಳು ಕೃಷಿ ಉಳಿಸುವತ್ತ ಮನ ಮಾಡಿಲ್ಲ; ಕೃಷಿಕರ ಬವಣೆಯನ್ನು ಆಲಿಸುವ ಪ್ರಯತ್ನವನ್ನೂ ಮಾಡಿಲ್ಲ. ಕಂಪೆನಿಯ ಸಿಬಂದಿ ಗ್ರಾಮಸ್ಥರನ್ನು ಗದರಿಸಿ ಕಾಮಗಾರಿ ಮಾಡುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಹಾಗೂ ಇಡೀ ಈ ಯೋಜನೆಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

 

ನ್ಯಾಯಾಲಯದ ಆದೇಶದ ಮೇರೆಗೆ ಕಾಮಗಾರಿಯನ್ನು ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
– ನರಸಪ್ಪ , ಕಾರ್ಕಳ ತಹಶೀಲ್ದಾರ್‌

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

13 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

13 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

13 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

16 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago