Featured

ಇನ್ನಾ ಗ್ರಾಮಸ್ಥರ ತೀವ್ರ ವಿರೋಧ – ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆ  – vishwanews24

ಇನ್ನಾ ಗ್ರಾಮಸ್ಥರ ತೀವ್ರ ವಿರೋಧ – ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆ

ಬೆಳ್ಮಣ್‌: ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಅವರ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ಗುರುವಾರ ನೀಡಿದೆ.

ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು ಇನ್ನಾ ಗ್ರಾಮದಲ್ಲಿ ಟವರ್‌ ನಿರ್ಮಾಣಕ್ಕೆ ಹಲವು ಸಮಯದಿಂದ ಸರ್ವೇ ಕಾರ್ಯ ನಡೆಯುತ್ತಿತ್ತು. ಟವರ್‌ ನಿರ್ಮಾಣದಿಂದ ಕೃಷಿ ಭೂಮಿ ನಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಗ್ರಾಮಸ್ಥರಿಂದ ಸಾಕಷ್ಟು ಹೋರಾಟ, ಮಾತಿನ ಚಕಮಕಿ ನಡೆದಿತ್ತು. ಆದರೆ ಕಾಮಗಾರಿಯನ್ನು ಗುತ್ತಿಗೆದಾರ ಸಂಸ್ಥೆಯು ಪೊಲೀಸ್‌ ಭದ್ರತೆಯಲ್ಲಿ ಬುಧವಾರ ಜೆಸಿಬಿ ಮೂಲಕ ಬೃಹತ್‌ ಹೊಂಡಗಳನ್ನು ನಿರ್ಮಿಸಿ ಕಾಮಗಾರಿಗೆ ಆರಂಭಿಸಿತ್ತು. ಗುರುವಾರವೂ ಕಾಮಗಾರಿ ಆರಂಭವಾದಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರೂ ಜಿಲ್ಲಾಧಿಕಾರಿಗಳ ಆದೇಶವಿದೆ ಎಂದು ಹೇಳಿ ಕಂಪೆನಿಯ ಸಿಬಂದಿ ಪೊಲೀಸರ ಸಹಕಾರದಲ್ಲಿ ಕಾಮಗಾರಿ ನಡೆಸಿದರು. ಮಧ್ಯಾಹ್ನದ ವೇಳೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯನ್ನು ನೀಡಿದ ಹಿನೆ‌°ಲೆಯಲ್ಲಿ ಕಾಮಗಾರಿ ಸ್ಥಗಿತವಾಗಿದೆ.

ಸ್ಥಳಕ್ಕೆ ಇನ್ನಾ ಗ್ರಾಮಕರಣಿಕ ಹಣಮಂತ, ಜಿ.ಪಂ. ಮಾಜಿ ಸದಸ್ಯೆ ರೇಷ್ಮಾ ಉದಯ್‌ ಶೆಟ್ಟಿ, ಗ್ರಾ.ಪಂ. ಸದಸ್ಯ ದೀಪಕ್‌ ಕೋಟ್ಯಾನ್‌, ಚಂದ್ರಹಾಸ್‌ ಶೆಟ್ಟಿ, ಗ್ರಾಮಸ್ಥರಾದ ಅಮರನಾಥ್‌ ಶೆಟ್ಟಿ, ಪ್ರವೀಣ್‌ ಶೆಟ್ಟಿ ಭೇಟಿ ನೀಡಿದ್ದರು.

ಟವರ್‌ ನಿರ್ಮಾಣದಿಂದ ಫ‌ಲವತ್ತಾದ ಕೃಷಿ ಭೂಮಿಗೆ ಅಪಾರ ಹಾನಿಯಾಗುತ್ತಿದೆ. ಯಾವುದೇ ಅಧಿಕಾರಿಗಳು ಕೃಷಿ ಉಳಿಸುವತ್ತ ಮನ ಮಾಡಿಲ್ಲ; ಕೃಷಿಕರ ಬವಣೆಯನ್ನು ಆಲಿಸುವ ಪ್ರಯತ್ನವನ್ನೂ ಮಾಡಿಲ್ಲ. ಕಂಪೆನಿಯ ಸಿಬಂದಿ ಗ್ರಾಮಸ್ಥರನ್ನು ಗದರಿಸಿ ಕಾಮಗಾರಿ ಮಾಡುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಹಾಗೂ ಇಡೀ ಈ ಯೋಜನೆಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

 

ನ್ಯಾಯಾಲಯದ ಆದೇಶದ ಮೇರೆಗೆ ಕಾಮಗಾರಿಯನ್ನು ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
– ನರಸಪ್ಪ , ಕಾರ್ಕಳ ತಹಶೀಲ್ದಾರ್‌

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

15 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

15 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

15 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

18 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

18 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 hours ago