ಬೆಳ್ಮಣ್: ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಅವರ ಕೃಷಿ ಜಮೀನಿನ ನಡುವೆ ವಿದ್ಯುತ್ ಟವರ್ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ಗುರುವಾರ ನೀಡಿದೆ.
ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್ ಸರಬರಾಜು ಮಾಡಲು ಇನ್ನಾ ಗ್ರಾಮದಲ್ಲಿ ಟವರ್ ನಿರ್ಮಾಣಕ್ಕೆ ಹಲವು ಸಮಯದಿಂದ ಸರ್ವೇ ಕಾರ್ಯ ನಡೆಯುತ್ತಿತ್ತು. ಟವರ್ ನಿರ್ಮಾಣದಿಂದ ಕೃಷಿ ಭೂಮಿ ನಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಗ್ರಾಮಸ್ಥರಿಂದ ಸಾಕಷ್ಟು ಹೋರಾಟ, ಮಾತಿನ ಚಕಮಕಿ ನಡೆದಿತ್ತು. ಆದರೆ ಕಾಮಗಾರಿಯನ್ನು ಗುತ್ತಿಗೆದಾರ ಸಂಸ್ಥೆಯು ಪೊಲೀಸ್ ಭದ್ರತೆಯಲ್ಲಿ ಬುಧವಾರ ಜೆಸಿಬಿ ಮೂಲಕ ಬೃಹತ್ ಹೊಂಡಗಳನ್ನು ನಿರ್ಮಿಸಿ ಕಾಮಗಾರಿಗೆ ಆರಂಭಿಸಿತ್ತು. ಗುರುವಾರವೂ ಕಾಮಗಾರಿ ಆರಂಭವಾದಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರೂ ಜಿಲ್ಲಾಧಿಕಾರಿಗಳ ಆದೇಶವಿದೆ ಎಂದು ಹೇಳಿ ಕಂಪೆನಿಯ ಸಿಬಂದಿ ಪೊಲೀಸರ ಸಹಕಾರದಲ್ಲಿ ಕಾಮಗಾರಿ ನಡೆಸಿದರು. ಮಧ್ಯಾಹ್ನದ ವೇಳೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯನ್ನು ನೀಡಿದ ಹಿನೆ°ಲೆಯಲ್ಲಿ ಕಾಮಗಾರಿ ಸ್ಥಗಿತವಾಗಿದೆ.
ಸ್ಥಳಕ್ಕೆ ಇನ್ನಾ ಗ್ರಾಮಕರಣಿಕ ಹಣಮಂತ, ಜಿ.ಪಂ. ಮಾಜಿ ಸದಸ್ಯೆ ರೇಷ್ಮಾ ಉದಯ್ ಶೆಟ್ಟಿ, ಗ್ರಾ.ಪಂ. ಸದಸ್ಯ ದೀಪಕ್ ಕೋಟ್ಯಾನ್, ಚಂದ್ರಹಾಸ್ ಶೆಟ್ಟಿ, ಗ್ರಾಮಸ್ಥರಾದ ಅಮರನಾಥ್ ಶೆಟ್ಟಿ, ಪ್ರವೀಣ್ ಶೆಟ್ಟಿ ಭೇಟಿ ನೀಡಿದ್ದರು.
ಟವರ್ ನಿರ್ಮಾಣದಿಂದ ಫಲವತ್ತಾದ ಕೃಷಿ ಭೂಮಿಗೆ ಅಪಾರ ಹಾನಿಯಾಗುತ್ತಿದೆ. ಯಾವುದೇ ಅಧಿಕಾರಿಗಳು ಕೃಷಿ ಉಳಿಸುವತ್ತ ಮನ ಮಾಡಿಲ್ಲ; ಕೃಷಿಕರ ಬವಣೆಯನ್ನು ಆಲಿಸುವ ಪ್ರಯತ್ನವನ್ನೂ ಮಾಡಿಲ್ಲ. ಕಂಪೆನಿಯ ಸಿಬಂದಿ ಗ್ರಾಮಸ್ಥರನ್ನು ಗದರಿಸಿ ಕಾಮಗಾರಿ ಮಾಡುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಹಾಗೂ ಇಡೀ ಈ ಯೋಜನೆಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದ ಮೇರೆಗೆ ಕಾಮಗಾರಿಯನ್ನು ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
– ನರಸಪ್ಪ , ಕಾರ್ಕಳ ತಹಶೀಲ್ದಾರ್
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…