Featured

ಇನ್ನುಂದೆ ವಿಮಾನಗಳಲ್ಲಿ  7ಕೆ.ಜಿ ಮೀರದ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಅವಕಾಶ – vishwanews24

ಇನ್ನುಂದೆ ವಿಮಾನಗಳಲ್ಲಿ  7ಕೆ.ಜಿ ಮೀರದ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಅವಕಾಶ

ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಬಹುದು. ಜೊತೆಗೆ ಅವರು ಕೊಂಡೊಯ್ಯುವ ಬ್ಯಾಗ್ 7 ಕೆ.ಜಿ. ಮೀರಿರಬಾರದು. ಅಲ್ಲದೆ ಬ್ಯಾಗ್ 115 ಸೆಂ.ಮೀ.ಗಿಂತ ಹೆಚ್ಚಿರಬಾರದು ಎಂದು ನಾಗರಿಕ ವಿಮಾನ ಯಾನ ಭದ್ರತಾ ಬ್ಯೂರೋ (ಬಿಸಿಎಎಸ್) ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಏರುತ್ತಿರುವ ಹಿನ್ನೆಲೆ ಬಿಸಿಎಎಸ್ ಮತ್ತು ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿ ಹೊಂದಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಹೊಸ ಹ್ಯಾಂಡ್ ಬ್ಯಾಗೇಜ್ ನೀತಿಗೆ ಸಂಬಂಧಿಸಿದ ನಿಯಮಗಳನ್ನು ಕಠಿಣಗೊಳಿಸಿದೆ.

ಹೊಸ ಬಿಸಿಎಎಸ್ ಹ್ಯಾಂಡ್ ಬ್ಯಾಗೇಜ್ ನೀತಿಯ ಪ್ರಕಾರ ಪ್ರಯಾಣಿಕರು ಈಗ ವಿಮಾನದೊಳಗೆ ಕೇವಲ ಒಂದು ಬ್ಯಾಗ್ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಈ ನಿಯಮ ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಪ್ರಯಾಣಿಕರಿಗೆ ಅನ್ವಯವಾಗುತ್ತದೆ. ಇನ್ನು ಫಸ್ಟ್ ಅಥವಾ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುವವರು 10 ಕೆ.ಜಿ. ವರೆಗೆ ಕೊಂಡೊಯ್ಯಬಹುದು. ಈ ಹೊಸ ನಿಯಮ ಈ ವರ್ಷ ಮೇ 2ಕ್ಕಿಂತ ಮೊದಲ ಟಿಕೆಟ್ ಬುಕ್ ಮಾಡಿದವರಿಗೆ ಅನ್ವಯಿಸುವುದಿಲ್ಲ.

ಮೇ 2ಕ್ಕಿಂತ ಮೊದಲು ಬುಕ್ ಮಾಡಿದ ಎಕಾನಮಿ ಪ್ರಯಾಣಿಕರು 8 ಕೆಜಿ, ಪ್ರೀಮಿಯಂ ಎಕಾನಮಿ ಪ್ರಯಾಣಿಕರು 10 ಕೆಜಿ ಮತ್ತು ಬಿಸಿನೆಸ್ ಕ್ಲಾಸ್‌ನ ಪ್ರಯಾಣಿಕರು 12 ಕೆಜಿ ತೂಕದ ಬ್ಯಾಗ್ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.

Vishwa News 24

Recent Posts

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

5 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

15 minutes ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

35 minutes ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

1 hour ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

2 hours ago

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

3 hours ago