Featured

ಇನ್ನುಮುಂದೆ ಕನ್ನಡದಲ್ಲೇ  ರೈಲ್ವೆ ಪರೀಕ್ಷೆ  ಬರೆಯಲು ಅವಕಾಶ: ಸಚಿವ ವಿ ಸೋಮಣ್ಣ – vishwanews24

ಇನ್ನುಮುಂದೆ ಕನ್ನಡದಲ್ಲೇ  ರೈಲ್ವೆ ಪರೀಕ್ಷೆ  ಬರೆಯಲು ಅವಕಾಶ: ಸಚಿವ ವಿ ಸೋಮಣ್ಣ

ದಾವಣಗೆರೆ: ಇನ್ನುಮುಂದೆ ಕನ್ನಡದಲ್ಲೇ  ರೈಲ್ವೆ ಪರೀಕ್ಷೆ  ನಡೆಸುವುದಾಗಿ ದಾವಣಗೆರೆಯಲ್ಲಿಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16,000 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು. ಕನ್ನಡದಲ್ಲೇ ಪರೀಕ್ಷೆ ಬರೆಯಲು ಮತ್ತು ಓದಲು ಪುಸ್ತಕಗಳು ಸಿಗುತ್ತವೆ, ಉಪಯೋಗಿಸಿಕೊಳ್ಳಿ. ಇಲ್ಲ ಇಂಗ್ಲಿಷ್‌ನಲ್ಲಿ ಇರುವುದನ್ನು ತರ್ಜುಮೆ ಮಾಡಲಾಗುತ್ತದೆ. ಅದನ್ನು ಓದಿ ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ಖಾಲಿ ಇರುವ 46,000 ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

ಅಲ್ಲದೇ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು, ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು, ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು, 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಇದು ಪೂರ್ಣವಾಗಲಿದೆ ಎಂದು ತಿಳಿಸಿದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದೆ. 2027ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು, ಇದಕ್ಕಾಗಿ 43,000 ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದು ಹೇಳಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

12 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

12 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

12 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

12 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

12 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

13 hours ago