ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್ಬಾಸ್ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ.
ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್ಬಾಸ್ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ.
ಎರಡು ದಿನಗಳ ಹಿಂದೆ ನಾಡು, ದೇಶ, ಧರ್ಮ, ಭಾಷೆ, ಸಿದ್ಧಾಂತಗಳ ವಿಚಾರದಲ್ಲಿ ತಮ್ಮ ನಿಲುವನ್ನು ಪ್ರಕಟಿಸಿದ್ದ ಬೆನ್ನಿಗೇ ಅವರು ಇದೀಗ ವೈವಾಹಿಕ ಬದುಕಿನ ಕುರಿತ ನಿರ್ಣಯವನ್ನೂ ಪ್ರಕಟಿಸಿದ್ದಾರೆ. ನಾಡು, ನುಡಿ, ದೇಶ, ಧರ್ಮದ ಕುರಿತು ಮಾತನಾಡಿದ್ದಕ್ಕೆ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದಲ್ಲದೆ ತೇಜೋವಧೆಗಳಾಗಿದ್ದರ ಬಗ್ಗೆ ಅವರು ತೀವ್ರ ಅಸಮಾಧಾನ ಹೊರಹಾಕಿದ್ದರು.
ತನ್ನನ್ನು ಸೈದ್ಧಾಂತಿಕವಾಗಿ, ವೈಚಾರಿಕವಾಗಿ ವಿರೋಧಿಸುವವರು ತನ್ನ ಕುಟುಂಬಸ್ಥರನ್ನು ಉದ್ದೇಶಿಸಿ ಅವಹೇಳನಕಾರಿ ಆಗಿ ಮಾತನಾಡುತ್ತಿದ್ದುದರ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನನ್ನ ಕುಟುಂಬಸ್ಥರ ಹಿತದ ದೃಷ್ಟಿಯಿಂದ ಇನ್ನು ನನ್ನ ಸಿದ್ಧಾಂತ, ನಾಡು-ನುಡಿ, ದೇಶ-ಧರ್ಮದ ಮೇಲಿನ ಅಭಿಮಾನ ಮನಸ್ಸಿನಲ್ಲಿ ಮಾತ್ರ ಇರಲಿದೆ, ಆ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂಬ ನಿರ್ಧಾರ ಎರಡು ದಿನಗಳ ಹಿಂದೆ ಪ್ರಕಟಿಸಿದ್ದರು.
ವಿಚ್ಛೇದನ ಕುರಿತು ಮಾಹಿತಿ ಪ್ರಕಟಿಸಿದ್ದಾರೆ. ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ ಎಂದು ಕಿರಿಕ್ ಕೀರ್ತಿ ತಮ್ಮ ವಿಚ್ಛೇದನವನ್ನು ಪ್ರಕಟಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…