ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್ಬಾಸ್ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ.
ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್ಬಾಸ್ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ.
ಎರಡು ದಿನಗಳ ಹಿಂದೆ ನಾಡು, ದೇಶ, ಧರ್ಮ, ಭಾಷೆ, ಸಿದ್ಧಾಂತಗಳ ವಿಚಾರದಲ್ಲಿ ತಮ್ಮ ನಿಲುವನ್ನು ಪ್ರಕಟಿಸಿದ್ದ ಬೆನ್ನಿಗೇ ಅವರು ಇದೀಗ ವೈವಾಹಿಕ ಬದುಕಿನ ಕುರಿತ ನಿರ್ಣಯವನ್ನೂ ಪ್ರಕಟಿಸಿದ್ದಾರೆ. ನಾಡು, ನುಡಿ, ದೇಶ, ಧರ್ಮದ ಕುರಿತು ಮಾತನಾಡಿದ್ದಕ್ಕೆ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದಲ್ಲದೆ ತೇಜೋವಧೆಗಳಾಗಿದ್ದರ ಬಗ್ಗೆ ಅವರು ತೀವ್ರ ಅಸಮಾಧಾನ ಹೊರಹಾಕಿದ್ದರು.
ತನ್ನನ್ನು ಸೈದ್ಧಾಂತಿಕವಾಗಿ, ವೈಚಾರಿಕವಾಗಿ ವಿರೋಧಿಸುವವರು ತನ್ನ ಕುಟುಂಬಸ್ಥರನ್ನು ಉದ್ದೇಶಿಸಿ ಅವಹೇಳನಕಾರಿ ಆಗಿ ಮಾತನಾಡುತ್ತಿದ್ದುದರ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನನ್ನ ಕುಟುಂಬಸ್ಥರ ಹಿತದ ದೃಷ್ಟಿಯಿಂದ ಇನ್ನು ನನ್ನ ಸಿದ್ಧಾಂತ, ನಾಡು-ನುಡಿ, ದೇಶ-ಧರ್ಮದ ಮೇಲಿನ ಅಭಿಮಾನ ಮನಸ್ಸಿನಲ್ಲಿ ಮಾತ್ರ ಇರಲಿದೆ, ಆ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂಬ ನಿರ್ಧಾರ ಎರಡು ದಿನಗಳ ಹಿಂದೆ ಪ್ರಕಟಿಸಿದ್ದರು.
ವಿಚ್ಛೇದನ ಕುರಿತು ಮಾಹಿತಿ ಪ್ರಕಟಿಸಿದ್ದಾರೆ. ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ ಎಂದು ಕಿರಿಕ್ ಕೀರ್ತಿ ತಮ್ಮ ವಿಚ್ಛೇದನವನ್ನು ಪ್ರಕಟಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…