ಹೊಸದಿಲ್ಲಿ: ಇನ್ನು ಎರಡು ವಾರಗಳ ಬಳಿಕ, ಅಂದರೆ ಜೂನ್ ದ್ವಿತೀಯಾರ್ಧದಲ್ಲಿ ರಾಷ್ಟ್ರೀಯ ಕ್ರಿಕೆಟ್ ಶಿಬಿರಗಳನ್ನು ಆರಂಭಿಸಲು ಕಾಲ ಪಕ್ವವಾದೀತು ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ ತಂಡ ತನ್ನ ಕೊನೆಯ ಪೂರ್ಣ ಪ್ರಮಾಣದ ಸರಣಿಯನ್ನು ನ್ಯೂಜಿಲ್ಯಾಂಡ್ ಪ್ರವಾಸದ ವೇಳೆ ಆಡಿತ್ತು. ಅನಂತರದ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿ ಕೋವಿಡ್-19 ದಿಂದಾಗಿ ಅರ್ಧದಲ್ಲೇ ಕೊನೆಗೊಂಡಿತು. ಬಹು ನಿರೀಕ್ಷೆಯ ಐಪಿಎಲ್ ಕೂಡ ಮುಂದೂಡಲ್ಪಟ್ಟಿತು. ಸದ್ಯ ಲಾಕ್ಡೌನ್ನಿಂದಾಗಿ ಕ್ರಿಕೆಟಿಗರೆಲ್ಲ ಮನೆಯಲ್ಲೇ ಉಳಿದುಕೊಂಡಿದ್ದಾರೆ.
ಈಗಾಗಲೇ ಬೇರೆ ಬೇರೆ ದೇಶಗಳ ಕ್ರಿಕೆಟಿಗರು ಹೊರಾಂಗಣ ಅಭ್ಯಾಸ ಆರಂಭಿಸಿದ ಕಾರಣ ಬಿಸಿಸಿಐ ಕೂಡ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದೆ ಎಂದು ಅರುಣ್ ಧುಮಾಲ್ ಹೇಳಿದರು. ಮಂಡಳಿಯ ಗುತ್ತಿಗೆ ವ್ಯಾಪ್ತಿಯ ಆಟಗಾರರಿಗೆ ಅಭ್ಯಾಸ ಶಿಬಿರವನ್ನು ಆಯೋಜಿಸುವುದು ಬಿಸಿಸಿಐನ ಮೊದಲ ಗುರಿಯಾಗಿದೆ. ಎನ್ಸಿಎ ಮತ್ತು ಇತರ ಕೆಲವೇ ನಿಗದಿತ ಕ್ರಿಕೆಟ್ ಕೇಂದ್ರಗಳನ್ನು ಗುರುತಿಸಿ ಅಲ್ಲಿ ಶಿಬಿರಗಳನ್ನು ಆಯೋಜಿಸುವುದು ಬಿಸಿಸಿಐ ಮುಂದಿರುವ ಯೋಜನೆ ಯಾಗಿದೆ ಎಂದು ಅವರು ಹೇಳಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…