Featured

ಇನ್ನು ಮುಂದಾದರೂ ಕಣಿವೆ ರಾಜ್ಯಗಳಲ್ಲಿ ಭಾರತೀಯತೆ ಹೆಚ್ಚಲಿ ಮತ್ತು ಹಿಂಸೆ ನಿಲ್ಲಲಿ, ಇದುವರೆಗೆ ಬಲಿದಾನವಾದ ಭಾರತೀಯ ಸೈನಿಕರ ಆತ್ಮಕ್ಕೆ ಶಾಂತಿ ಸಿಗಲಿ : ಡಾ| ಡಿ. ವೀರೇಂದ್ರ ಹೆಗ್ಗಡೆ -Vishwanews24

ಬೆಳ್ತಂಗಡಿ: ಇನ್ನು ಮುಂದಾದರೂ ಕಣಿವೆ ರಾಜ್ಯಗಳಲ್ಲಿ ಭಾರತೀಯತೆ ಹೆಚ್ಚಲಿ ಮತ್ತು ಹಿಂಸೆ ನಿಲ್ಲಲಿ ಇದುವರೆಗೆ ಬಲಿದಾನವಾದ ಭಾರತೀಯ ಸೈನಿಕರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದ್ದಾರಲ್ಲದೆ, ಸರಕಾರದ ನಡೆಯನ್ನು ಸ್ವಾಗತಿಸಿದ್ದಾರೆ.

ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನದಿಂದ ಅನಿಶ್ಚಿತತೆಯಿಂದಿರುವ ರಾಜ್ಯಕ್ಕೆ ಸ್ಪಷ್ಟ ನಿಲುವು ಸಿಕ್ಕಿದೆ. ಯಾವುದೇ ಕಾರಣಕ್ಕೂ ಕಾಶ್ಮೀರ ಭಾರತದ ಅಂಗವೆಂದು ಇದ್ದ ಧೋರಣೆಗೆ ಸಂವಿಧಾನತ್ಮಕವಾದ ನಿಲುವು ಮತ್ತು ದೃಢವಾದ ಮುದ್ರೆ ಬಿದ್ದಿದೆ.

ಹೆಗ್ಗಡೆಯವರು ತಮ್ಮ ಹಿಂದಿನ ಕಾಶ್ಮೀರ ಪ್ರವಾಸದ ಸಂದರ್ಭವನ್ನು ನೆನಪಿಸುತ್ತಾ, ನಾವು 2017 ರ ಜುಲೈ ತಿಂಗಳಲ್ಲಿ ಕಾಶ್ಮೀರದ ಶ್ರೀನಗರದಲ್ಲಿ ಒಂದು ವಾರ ಇದ್ದೆವು. ಅಲ್ಲಿನ ಜನಜೀವನದಲ್ಲಿ ಸ್ಥಳೀಯರು ಭಯದಿಂದ ವಾಸಿಸುತ್ತಿದ್ದರು ಮತ್ತು ಸದ್ಯ ನಡೆಯುತ್ತಿದ್ದ ಭಯೋತ್ಪಾದಕತೆಯ ಚಲನವಲನಗಳಿಂದ ಆಗಿರುವ ನಷ್ಟಗಳನ್ನು ಹೇಳಿಕೊಳ್ಳುತ್ತಿದ್ದರು.

ಮುಖ್ಯವಾಗಿ ಕಾಶ್ಮೀರವನ್ನು ಭಾರತದ ಭಾಗವೆಂದು ಹೊರ ರಾಜ್ಯದವರು ಪರಿಗಣಿಸಿದ್ದರು. ಅಲ್ಲಿ ವಾಸಿಸುತ್ತಿದ್ದ ಯುವಕರಿಗೆ ಆ ಭಾವನೆ ಇರಲಿಲ್ಲ, ಆದರೆ, ಅಲ್ಲಿನ ಬಹುತೇಕ ಮಂದಿಗೆ ಇದರಿಂದ ಲಾಭವೇನು ಇರಲಿಲ್ಲ. ದೇಶ-ವಿದೇಶದಿಂದ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆ ಆಗಿತ್ತು. ಅವರು ನಿರುದ್ಯೋಗದಿಂದ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ಅವರು ವಿವರಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago