ಇನ್ನು ಮುಂದೆಯೂ ಹೆಚ್ಚು ದೇಶ ಕಟ್ಟವ ಕಾರ್ಯದಲ್ಲಿ ತೊಡಗುತ್ತೇನೆ. ಯಾವುದೇ ರೀತಿಯ ಬೆದರಿಕೆಗೂ ಬಗ್ಗುವುದಿಲ್ಲ : ಚಕ್ರವರ್ತಿ ಸೂಲಿಬೆಲೆ -Vishwanews24

ಹಾವೇರಿ: ಇನ್ನು ಮುಂದೆಯೂ ಹೆಚ್ಚು ದೇಶ ಕಟ್ಟವ ಕಾರ್ಯದಲ್ಲಿ ತೊಡಗುತ್ತೇನೆ. ಯಾವುದೇ ರೀತಿಯ ಬೆದರಿಕೆಗೂ ಬಗ್ಗುವುದಿಲ್ಲ ಎಂದು ಖ್ಯಾತ ವಾಗ್ಮಿ, ಚಿಂತಕ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಹಾವೇರಿಯಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಕ್ರವರ್ತಿ ಸೂಲಿಬೆಲೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹತ್ಯೆಗೆ ಸಂಚು ರೂಪಿಸಿರುವ ಸಂಘಟನೆ ಸದಾ ದೇಶದ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದೆ. ದೇಶಭಕ್ತರ ಹಾಗೂ ದೇಶದ ಪರವಾಗಿ ಹೋರಾಟ ನಡೆಸುವವರನ್ನು ಹತ್ಯೆ ಮಾಡಲು ದೇಶ ವಿರೋಧಿಗಳ ಗುಂಪು ಹವಣಿಸುತ್ತಿದೆ ಎಂದರು.

ಅಂದು ನಡೆದ ಸಮಾವೇಶದಲ್ಲಿ ನಾನು ಭಾಗಿಯಾಗಿದ್ದೆ. ಒಂದು ಸಮಯದಲ್ಲಿ ನನ್ನ ಮೇಲೆ ಕೆಲವು ಕಲ್ಲುಗಳು ತೂರಿಬಂದವು. ಪೊಲೀಸ್‌ ಆಯುಕ್ತರನ್ನು ಖುದ್ದಾಗಿ ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ಈ ಆನಂತರ ಪೊಲೀಸರು ಸಿಸಿಟಿವಿ ಕ್ಯಾಮರಾಗಳ ದೃಶ್ಯಗಳನ್ನು ಆಧರಿಸಿ ಆರು ಮಂದಿಯನ್ನು ಸೆರೆ ಹಿಡಿದ್ದಾರೆ ಎಂದು ತಿಳಿಸಿದರು.

ಕೆಲವು ಮೂಲಭೂತ ಸಂಘಟನೆಗಳು ಅಶಾಂತಿಯನ್ನೇ ಬಯಸುತ್ತದೆ. ಆದರೆ ಹಿಂದೂ ಸಮಾಜ ಸದಾ ಶಾಂತಿಯನ್ನು ಬಯಸುತ್ತದೆ. ನಾವು ಶಾಂತಿಪ್ರಿಯರು. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಕ್ಕೆ ನಾವು ಕೂಡ ಕೈ ಜೋಡಿಸುತ್ತಿದ್ದೇವೆ. ಈ ವಿಷಯದಲ್ಲಿ ನನಗೆ ಹೆಮ್ಮೆ ಇದೆ. ದೇಶ ಸೇವೆ ಕಾಯಕ ನಿರಂತರ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ಕಳೆದ ಡಿಸೆಂಬರ್‌ 22ರಂದು ನಡೆದ ಘಟನೆಯ ನಂತರ ಪೊಲೀಸರು ಹೆಚ್ಚುವರಿ ಭದ್ರತೆ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ. ಕೆಲವರು ರಿವಾಲ್ವರ್‌ ಲೈಸೆನ್ಸ್‌ ಪಡೆಯುವಂತೆಯೂ ಸಲಹೆ ನೀಡಿದ್ದಾರೆ. ಆದರೆ ಪೊಲೀಸ್‌ ಆಯುಕ್ತರು ಗನ್‌ಮ್ಯಾನ್ ನೀಡುವ ಬಗ್ಗೆ ತಿಳಿಸಿದ್ದಾರೆ ಎಂದು ಹೇಳಿದರು.

ಈ ಘಟನೆಯಿಂದ ನಾನು ವಿಚಲಿತನಾಗಿಲ್ಲ. ಇನ್ನು ಮುಂದೆಯೂ ಹೆಚ್ಚು ದೇಶ ಕಟ್ಟವ ಕಾರ್ಯದಲ್ಲಿ ತೊಡಗುತ್ತೇನೆ. ಯಾವುದೇ ರೀತಿಯ ಬೆದರಿಕೆಗೂ ಬಗ್ಗುವುದಿಲ್ಲ. ದೇಶದಲ್ಲಿ ಶಾಂತಿ, ಸಮೃದ್ಧಿ ಇರಬೇಕು. ಇದಕ್ಕಾಗಿ ದುಡಿಯುವವರ ಕೈ ಜೋಡಿಸುತ್ತೇನೆ ಎಂದು ಚಕ್ರವರ್ತಿ ಸೂಲಿಬೆಲೆ ಸ್ಪಷ್ಟಪಡಿಸಿದರು.

ಪೌರತ್ವ ತಿದ್ದುಪಡಿ ಕಾಯಿದೆ ಪರವಾಗಿ ನಡೆಯುತ್ತಿದ್ದ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸ್ಕೆಚ್‌ ಹಾಕಿದ್ದವರು ಈಗ ಪೊಲೀಸರ ವಶದಲ್ಲಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

4 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

4 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

5 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

5 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

5 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

5 hours ago