Featured

ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ , ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್ -Vishwanews24

ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ , ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್ -Vishwanews24

ಮೈಸೂರು: ‘ನೀವೇ ನಮ್ಮ ನಾಯಕರು ಅಂತಲೇ ಹೇಳುತ್ತಾ ಬಂದಿದ್ದೇನೆ. ನಾನು ಯಾವತ್ತೂ ನಿಮ್ಮ ಜತೆ ಪೈಪೋಟಿ ಮಾಡಿಲ್ಲ. ಬನ್ನಿ, ನಾಳೆಯೇ ಜವಾಬ್ದಾರಿ ಹೊತ್ತುಕೊಳ್ಳಿ. ಎಚ್‌.ಡಿ.ಕುಮಾರಸ್ವಾಮಿ ಜತೆ ಸೇರಿಕೊಂಡು ಪಕ್ಷವನ್ನು ಕಟ್ಟಿ’ ಎಂದು ಶಾಸಕ ಸಾ.ರಾ.ಮಹೇಶ್‌ ಅವರು ಪಕ್ಷದ ಚಟುವಟಿಕೆಗಳಿಂದ ದೂರವಾಗಿರುವ ಜಿ.ಟಿ.ದೇವೇಗೌಡ ಅವರಿಗೆ ಆಹ್ವಾನ ನೀಡಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನೀವು ಸಕ್ರಿಯವಾಗಿಲ್ಲ ಎಂಬ ಕಾರಣ ನಾನು ಸ್ವಲ್ಪ ಓಡಾಡುತ್ತಿದ್ದೇನೆ. ನನ್ನ ಈ ಓಡಾಟದಿಂದ ನಿಮಗೆ ನೋವಾಗಿದ್ದರೆ ದೂರ ಸರಿಯುವೆ. ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ ಎಂದು ಚಾಮುಂಡಿಬೆಟ್ಟದಲ್ಲಿ ಪ್ರಮಾಣ ಮಾಡಿ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ನೀವು ಕಾರ್ಯಕರ್ತರ ಜತೆ ಸೇರಿಕೊಂಡು ಪಕ್ಷವನ್ನು ಉಳಿಸುವ ಕೆಲಸ ಮಾಡಿ’ ಎಂದು ಭಾವುಕರಾಗಿ ಕಣ್ಣೀರು ಹಾಕಿದರು.

ಇದನ್ನೂ ಓದಿ : ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24

‘ನೀವು‍ ಪದೇ ಪದೇ ನನ್ನನ್ನು ಟೀಕಿಸುತ್ತಿದ್ದೀರಿ. ಎಷ್ಟೇ ಟೀಕೆ ಮಾಡಿದರೂ ನಿಮ್ಮ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ನಾನು ಏನು ಅನ್ಯಾಯ ಮಾಡಿದ್ದೇನೆ, ನಿಮ್ಮ ಜತೆ ಇರುವ ಕಾರ್ಯಕರ್ತರಲ್ಲಿ ನಾನೂ ಒಬ್ಬ ಎಂಬುದನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ, ನನ್ನ ಮೇಲೆ ದ್ವೇಷ ಏಕೆ? ಎಂದು ಭಾವುಕರಾದರು.

‘ಪದೇ ಪದೇ ನಮ್ಮ ವಿರುದ್ಧ ಮಾತನಾಡಿದರೆ ಎಷ್ಟು ಅಂತ ಸಹಿಸೋದು? ನನಗೂ ರಾಜಕಾರಣ ಬೇಸರ ಆಗಿದೆ. ಈ ಜಿಲ್ಲೆಯಲ್ಲಿ ಪಕ್ಷವನ್ನು ಉಳಿಸಿಬೇಕು ಎಂದು ಹೋರಾಟ ಮಾಡುತ್ತಿದ್ದೇವೆ. ನನ್ನಿಂದ ತ‍ಪ್ಪು ಆಗಿದ್ದರೆ ಈ ಅವಧಿ ಮುಗಿದ ಕೂಡಲೇ ರಾಜಕೀಯ ಮತ್ತು ಸಾರ್ವಜನಿಕ ಜೀವದಿಂದ ನಿವೃತ್ತಿಯಾಗುತ್ತೇನೆ’ ಎಂದರು.

ಇದನ್ನೂ ಓದಿ : ಉಡುಪಿ: ಅಜ್ಜರಕಾಡಿನಲ್ಲಿ 10 ದಿನಗಳ ಸೇನಾ ನೇಮಕಾತಿ ರ‍್ಯಾಲಿಗೆ ಚಾಲನೆ -Vishwanews24

‘ಮೈಮುಲ್‌ ಚುನಾವಣೆಯಲ್ಲಿ ನಾವು ಅಭ್ಯರ್ಥಿಗಳನ್ನು ಹಾಕದೇ ಇದ್ದರೆ ಅವಿರೋಧ ಆಯ್ಕೆ ನಡೆಯುತ್ತಿತ್ತು. ಆದರೆ ನಾವು ಕಣಕ್ಕಿಳಿದ ಕಾರಣ 15 ರಲ್ಲಿ ಮೂರು ಸ್ಥಾನಗಳು ಲಭಿಸಿವೆ. ಈ ಫಲಿತಾಂಶ ಸಮಾಧಾನ ನೀಡಿದೆ’ ಎಂದರು.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

13 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

13 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

14 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

14 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

16 hours ago