ಬೆಂಗಳೂರು: ಹುಣಸೂರು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮೂಲಕ ಗೆದ್ದು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು, ಕೊನೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತರೊಂದಿಗೆ ಸೇರಿ ಅನರ್ಹತೆಯ ಶಿಕ್ಷೆ ಅನುಭವಿಸುತ್ತಿರುವ ಹೆಚ್ ವಿಶ್ವನಾಥ್ ಇದೀಗ ಹೆಚ್ ವಿಶ್ವನಾಥ್ ಘೋಷಿಸಿದ್ದಾರೆ.
ರಾಜ್ಯದ ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಕಂಗೆಟ್ಟಿರುವ ಎಚ್. ವಿಶ್ವನಾಥ್ ಇನ್ನು ಮುಂದೆ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ರಾಜಕೀಯ ಚಟುವಟಿಕೆಗಳಿಗೆ ಮರಳುವುದಿಲ್ಲ ಎಂದು ಹೇಳಿದರು.
ಇತ್ತೀಚೆಗೆ ಜೆಡಿಎಸ್ ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಎಚ್.ವಿಶ್ವನಾಥ್ ಸ್ವಾಗತಿಸಿದ್ದರು. ರಾಷ್ಟ್ರೀಯ ಅಧ್ಯಕ್ಷರಿಗೆ ನನ್ನನ್ನು ಪಕ್ಷದಿಂದ ಉಚ್ಚಾಟಿಸುವ ಅಧಿಕಾರವಿದೆ. ಅದರಂತೆ ದೇವೇಗೌಡರು ತಮ್ಮನ್ನು ಉಚ್ಚಾಟಿಸಿದ್ದಾರೆ. ಈ ಮೂಲಕ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ ಎಂದು ಪರೋಕ್ಷವಾಗಿ ತಿವಿದಿದ್ದರು.
ಮೈತ್ರಿ ಸರ್ಕಾರದ ಆಡಳಿತ ಬಿರುಕುಗೊಳ್ಳಲು ಮತ್ತು ಸರ್ಕಾರ ಪತನವಾಗಲು ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಕಾರಣ, ನಾವಲ್ಲ ಎಂದರು. ಕಾಂಗ್ರೆಸ್ನಲ್ಲಿ ಸಂಸದನಾಗಿದ್ದಾಗ ಸುಳ್ಳು ಆರೋಪ ಹೊರಿಸಿ ಉಚ್ಚಾಟನೆ ಮಾಡವಂತೆ ಹೈಕಮಾಂಡ್ಗೆ ದೂರು ನೀಡಲು ಮುಂದಾಗಿದ್ದರು. ಈ ವಿಷಯವನ್ನು ಕೆ.ಸಿ. ವೇಣುಗೋಪಾಲ್ ಅವರೇ ತಿಳಿಸಿದ್ದರು. ಸಿದ್ದರಾಮಯ್ಯ ನನಗೆ ಒಂದಲ್ಲ ಒಂದು ರೀತಿಯ ಅವಮಾನ ಮಾಡುತ್ತಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…