Featured

ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಕನಿಷ್ಟ ಶಿಕ್ಷಣ ಅರ್ಹತೆ ಬೇಕಾಗಿಲ್ಲ -Vishwanews24

ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಚಾಲಕರಿಗೆ ಕನಿಷ್ಟ ಶಿಕ್ಷಣ ಅರ್ಹತೆಯೆ ಅಗತ್ಯವನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಾರಿಗೆ ಸಚಿವಾಲಯ ಹೇಳಿದೆ.

ಚಾಲಕರ ಆಕ್ರೋಶಕ್ಕೆ ಕಾರಣವಾಗಿದ್ದ ಕನಿಷ್ಟ ಶಿಕ್ಷಣ ಇರಬೇಕೆಂಬ ನಿಯಮವನ್ನು ಕೇಂದ್ರ ಸರ್ಕಾರ ಇದೀಗ ಕೈಬಿಟ್ಟಿರುವುದು ಸಂತಸ ತಂದಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಲಕ್ಷಾಂತರ ಜನರಿಗೆ ಈ ನಿಯಮದಿಂದ ಉದ್ಯೋಗದ ಸಮಸ್ಯೆಯಾಗಿ, ನಿರುದ್ಯೋಗ ಸೃಷ್ಟಿಯಾಗಬಹುದು ಎಂಬ ಲೆಕ್ಕಾಚಾರದಲ್ಲಿ ಈ ನಿಯಮ ಸಡಿಲಿಸಲಾಗಿದೆ. ಸೆಂಟ್ರಲ್ ಮೋಟಾರು ವಾಹನ ನಿಯಮಗಳು, 1989 ರ ನಿಯಮ 8 ರ ಅಡಿಯಲ್ಲಿ, ಸಾರಿಗೆ ವಾಹನ ಚಾಲಕನು 8 ನೇ ತರಗತಿಯಲ್ಲಿ ಕಡ್ಡಾಯವಾಗಿ ಉತ್ತೀರ್ಣನಾಗಿರಬೇಕು ಎಂಬ ನಿಯಮವಿತ್ತು.

ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ ತೆಗೆದು ಹಾಕಲು ರಸ್ತೆ ಸಾರಿಗೆ ಸಚಿವಾಲಯ ಅಧಿಕೃತ ಆದೇಶವನ್ನು ಪ್ರಕಟಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ಔಪಚಾರಿಕ ಶಿಕ್ಷಣ ಪಡೆಯದವರು ಹೆಚ್ಚಿನ ಪ್ರಮಾಣದಲ್ಲಿದ್ದು, ನಿರುದ್ಯೋಗವೂ ಇದೆ. ಜೊತೆಗೆ ಇವರು ಚಾಲನಾ ವೃತ್ತಿಯಲ್ಲಿ ಉತ್ತಮ ಕೌಶಲ್ಯ ಹೊಂದಿದ್ದಾರೆ. ಸರಕು ಸಾಗಣೆ ಕ್ಷೇತ್ರದಲ್ಲಿ 22 ಲಕ್ಷ ಚಾಲಕರ ಕೊರತೆ ಇದ್ದು, ಕೊರತೆಯನ್ನು ನೀಗಿಸಲು ನಿಯಮ ಸಡಿಲಿಸಲಾಗಿದೆ. ಆದರೆ ಸುರಕ್ಷತೆ ದೃಷ್ಟಿಯಿಂದ ಶೈಕ್ಷಣಿಕ ಅರ್ಹತೆ ಹೊರತುಪಡಿಸಿ ಚಾಲಕನ ತರಬೇತಿ, ಕೌಶಲ್ಯ ಪರೀಕ್ಷೆಗೆ ಸರ್ಕಾರ ಒತ್ತು ನೀಡಿದೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

14 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

14 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

14 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

15 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

15 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

15 hours ago