Featured

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ?

ಕ್ಯಾಲಿಫೋರ್ನಿಯಾ : ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಆ್ಯಪ್ ವಾಟ್ಸಪ್ ತನ್ನ ಬಳಕೆದಾರರ ಗೌಪ್ಯತೆಯನ್ನು ಮತ್ತಷ್ಟು ಬಲಪಡಿಸಲು ಶೀಘ್ರದಲ್ಲೇ ಅತ್ಯಂತ ಪ್ರಮುಖ ಬದಲಾವಣೆಯೊಂದನ್ನು ತರಲು ಸಜ್ಜಾಗಿದೆ.

ಇನ್ನು ಮುಂದೆ ಬಳಕೆದಾರರು ತಮ್ಮ ವೈಯಕ್ತಿಕ ಫೋನ್ ನಂಬರ್ ಹಂಚಿಕೊಳ್ಳದೆಯೇ ಇತರರೊಂದಿಗೆ ಚಾಟ್ ಮಾಡಲು ಅನುವು ಮಾಡಿಕೊಡುವ ಯೂಸರ್ ನೇಮ್ ವೈಶಿಷ್ಟ್ಯವನ್ನು ವಾಟ್ಸಪ್ ಪರೀಕ್ಷಿಸುತ್ತಿದೆ.

ಪ್ರಸ್ತುತ ಈಗ ವಾಟ್ಸಪ್‌ನಲ್ಲಿ ಯಾರೊಂದಿಗಾದರೂ ಚಾಟ್ ಮಾಡಬೇಕಾದರೆ ಅಥವಾ ಗ್ರೂಪ್‌ಗೆ ಸೇರಬೇಕಾದರೆ ಫೋನ್ ನಂಬರ್ ಕಾಣಿಸುವುದು ಕಡ್ಡಾಯ. ಆದರೆ ಈ ಹೊಸ ಫೀಚರ್‌ ಜಾರಿಯಾದ ನಂತರ ಇನ್‌ಸ್ಟಾಗ್ರಾಮ್, ಎಕ್ಸ್ ಅಥವಾ ಟೆಲಿಗ್ರಾಂ ಮಾದರಿಯಲ್ಲಿಯೇ ಪ್ರತಿಯೊಬ್ಬರಿಗೂ ವಿಶಿಷ್ಟವಾದ ಯೂಸರ್ ನೇಮ್ ನೀಡಲಾಗುತ್ತದೆ. ನಿಮ್ಮ ನಂಬರ್ ಇಲ್ಲದವರೂ ಸಹ ಕೇವಲ ನಿಮ್ಮ ಯೂಸರ್ ನೇಮ್ ಹುಡುಕುವ ಮೂಲಕ ನಿಮಗೆ ಮೆಸೇಜ್ ಕಳುಹಿಸಬಹುದಾಗಿದೆ.

ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಂ ಆ್ಯಪ್‌ಗಳ ಮಾದರಿಯಲ್ಲಿಯೇ ವಾಟ್ಸಪ್‌ನಲ್ಲೂ ತಮ್ಮ ಇಷ್ಟದ ಯೂಸರ್ ನೇಮ್ ಅನ್ನು ಸೆಟ್ ಮಾಡಿಕೊಳ್ಳಬಹುದು. ವಿಶಿಷ್ಟವಾದ ಯೂಸರ್ ನೇಮ್‌ಗಳನ್ನು ರಿಸರ್ವ್ ಮಾಡಲು ಅವಕಾಶ ಸಿಗಲಿದೆ. ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ಈ ಹೆಸರುಗಳು ಸಿಗಲಿದ್ದು, ನಿಮ್ಮ ಪ್ರೊಫೈಲ್‌ಗೆ ಸೂಕ್ತವಾದ ಹೆಸರನ್ನು ನೀವೇ ಆಯ್ದುಕೊಳ್ಳಬಹುದು. ಇದರಿಂದ ಅಪರಿಚಿತರಿಗೆ ನಿಮ್ಮ ಫೋನ್ ನಂಬರ್ ತಿಳಿಯದಂತೆ ಗೌಪ್ಯತೆ ಕಾಯ್ದುಕೊಳ್ಳಬಹುದು.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

33 minutes ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

45 minutes ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

1 hour ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

1 hour ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

1 hour ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

2 hours ago