Featured

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ?

ಕ್ಯಾಲಿಫೋರ್ನಿಯಾ : ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಆ್ಯಪ್ ವಾಟ್ಸಪ್ ತನ್ನ ಬಳಕೆದಾರರ ಗೌಪ್ಯತೆಯನ್ನು ಮತ್ತಷ್ಟು ಬಲಪಡಿಸಲು ಶೀಘ್ರದಲ್ಲೇ ಅತ್ಯಂತ ಪ್ರಮುಖ ಬದಲಾವಣೆಯೊಂದನ್ನು ತರಲು ಸಜ್ಜಾಗಿದೆ.

ಇನ್ನು ಮುಂದೆ ಬಳಕೆದಾರರು ತಮ್ಮ ವೈಯಕ್ತಿಕ ಫೋನ್ ನಂಬರ್ ಹಂಚಿಕೊಳ್ಳದೆಯೇ ಇತರರೊಂದಿಗೆ ಚಾಟ್ ಮಾಡಲು ಅನುವು ಮಾಡಿಕೊಡುವ ಯೂಸರ್ ನೇಮ್ ವೈಶಿಷ್ಟ್ಯವನ್ನು ವಾಟ್ಸಪ್ ಪರೀಕ್ಷಿಸುತ್ತಿದೆ.

ಪ್ರಸ್ತುತ ಈಗ ವಾಟ್ಸಪ್‌ನಲ್ಲಿ ಯಾರೊಂದಿಗಾದರೂ ಚಾಟ್ ಮಾಡಬೇಕಾದರೆ ಅಥವಾ ಗ್ರೂಪ್‌ಗೆ ಸೇರಬೇಕಾದರೆ ಫೋನ್ ನಂಬರ್ ಕಾಣಿಸುವುದು ಕಡ್ಡಾಯ. ಆದರೆ ಈ ಹೊಸ ಫೀಚರ್‌ ಜಾರಿಯಾದ ನಂತರ ಇನ್‌ಸ್ಟಾಗ್ರಾಮ್, ಎಕ್ಸ್ ಅಥವಾ ಟೆಲಿಗ್ರಾಂ ಮಾದರಿಯಲ್ಲಿಯೇ ಪ್ರತಿಯೊಬ್ಬರಿಗೂ ವಿಶಿಷ್ಟವಾದ ಯೂಸರ್ ನೇಮ್ ನೀಡಲಾಗುತ್ತದೆ. ನಿಮ್ಮ ನಂಬರ್ ಇಲ್ಲದವರೂ ಸಹ ಕೇವಲ ನಿಮ್ಮ ಯೂಸರ್ ನೇಮ್ ಹುಡುಕುವ ಮೂಲಕ ನಿಮಗೆ ಮೆಸೇಜ್ ಕಳುಹಿಸಬಹುದಾಗಿದೆ.

ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಂ ಆ್ಯಪ್‌ಗಳ ಮಾದರಿಯಲ್ಲಿಯೇ ವಾಟ್ಸಪ್‌ನಲ್ಲೂ ತಮ್ಮ ಇಷ್ಟದ ಯೂಸರ್ ನೇಮ್ ಅನ್ನು ಸೆಟ್ ಮಾಡಿಕೊಳ್ಳಬಹುದು. ವಿಶಿಷ್ಟವಾದ ಯೂಸರ್ ನೇಮ್‌ಗಳನ್ನು ರಿಸರ್ವ್ ಮಾಡಲು ಅವಕಾಶ ಸಿಗಲಿದೆ. ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ಈ ಹೆಸರುಗಳು ಸಿಗಲಿದ್ದು, ನಿಮ್ಮ ಪ್ರೊಫೈಲ್‌ಗೆ ಸೂಕ್ತವಾದ ಹೆಸರನ್ನು ನೀವೇ ಆಯ್ದುಕೊಳ್ಳಬಹುದು. ಇದರಿಂದ ಅಪರಿಚಿತರಿಗೆ ನಿಮ್ಮ ಫೋನ್ ನಂಬರ್ ತಿಳಿಯದಂತೆ ಗೌಪ್ಯತೆ ಕಾಯ್ದುಕೊಳ್ಳಬಹುದು.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

39 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

1 hour ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

3 hours ago