Featured

ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿ ಬಿಡುಗಡೆ – vishwanews24

ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿ ಬಿಡುಗಡೆ

ನವದೆಹಲಿ: ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಭಾರತೀಯ ರೈಲ್ವೇ  ತಿಳಿಸಿದೆ.

ಪ್ರಸ್ತುತ 4 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಜುಲೈ 1 ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್  ಬಿಡುಗಡೆಯಾಗಲಿದೆ.

ಈ ಬದಲಾವಣೆಯಿಂದ ಪ್ರಯಾಣಿಕರಿಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ. ಒಂದು ವೇಳೆ ವೇಟಿಂಗ್‌ ಲಿಸ್ಟ್‌ನಲ್ಲಿದ್ದ ಪ್ರಯಾಣಿಕರಿಗೆ ಟಿಕೆಟ್‌ ಸಿಗದೇ ಇದ್ದರೆ ಪರ್ಯಾಯ ಪ್ರಯಾಣ ವ್ಯವಸ್ಥೆಗಳನ್ನು ಮಾಡಲು ಸಮಯ ಸಿಗಲಿದೆ.

ಜುಲೈ 1 ರಿಂದ 2025 ರಿಂದ ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲಿಸಿದ ಬಳಕೆದಾರರಿಗೆ ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುವುದು ಎಂದು ಭಾರತೀಯ ರೈಲ್ವೆ ಹೇಳಿದೆ.

ತಾತ್ಕಾಲ್ ಬುಕ್ಕಿಂಗ್‌ಗಳಿಗಾಗಿ ಒಟಿಪಿ ಆಧಾರಿತ ದೃಢೀಕರಣದ ಅನುಷ್ಠಾನವು ಜುಲೈ ಕೊನೆಯಿಂದ ಆರಂಭವಾಗಲಿದೆ. ಬಳಕೆದಾರರು ಆಧಾರ್ ಅಥವಾ ತಮ್ಮ ಡಿಜಿಲಾಕರ್ ಖಾತೆಗಳಲ್ಲಿ ಸಂಗ್ರಹವಾಗಿರುವ ಇತರ ಮಾನ್ಯ ಸರ್ಕಾರಿ ಗುರುತಿನ ದಾಖಲೆಗಳನ್ನು ಬಳಸಿಕೊಂಡು ತಮ್ಮ ಗುರುತನ್ನು ಪರಿಶೀಲಿಸಬೇಕಾಗುತ್ತದೆ.

ಈ ಹಿಂದೆ ಆಧಾರ್-ಪ್ರಮಾಣೀಕೃತ ಬಳಕೆದಾರರು ಮಾತ್ರ ಜುಲೈ 1 ರಿಂದ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಿಸಿತ್ತು.

ಸೆಪ್ಟೆಂಬರ್‌ ವೇಳೆ ಪ್ರಯಾಣಿಕರ ಹೊಸ ರಿಸರ್ವೇಷನ್‌ ವ್ಯವಸ್ಥೆ ಜಾರಿಗೆ ಬರಲಿದೆ. ಸದ್ಯ ಪ್ರತಿ ನಿಮಿಷಕ್ಕೆ 32 ಸಾವಿರ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದು. ಆದರೆ ವೆಬ್‌ಸೈಟ್‌ ನವೀಕರಣಗೊಳಿಸಿದ ಬಳಿಕ ಪ್ರತಿ ನಿಮಿಷಕ್ಕೆ 1.50 ಲಕ್ಷ ಟಿಕೆಟ್‌ ಬುಕ್‌ ಮಾಡುವಂತೆ ಅಪ್‌ಗ್ರೇಡ್‌ ಮಾಡಲಾಗುತ್ತದೆ. ಅಷ್ಟೇ ಅಲ್ಲದೇ ಬಹು ಭಾಷೆಗಳನ್ನು ಬೆಂಬಲಿಸುವ ಬಳಕೆದಾರ ಸ್ನೇಹಿ ಇಂಟರ್ಫೇಸ್ ಇರಲಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

2 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

3 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

3 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

4 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

5 hours ago