Featured

ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿ ಬಿಡುಗಡೆ – vishwanews24

ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿ ಬಿಡುಗಡೆ

ನವದೆಹಲಿ: ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಭಾರತೀಯ ರೈಲ್ವೇ  ತಿಳಿಸಿದೆ.

ಪ್ರಸ್ತುತ 4 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಜುಲೈ 1 ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್  ಬಿಡುಗಡೆಯಾಗಲಿದೆ.

ಈ ಬದಲಾವಣೆಯಿಂದ ಪ್ರಯಾಣಿಕರಿಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ. ಒಂದು ವೇಳೆ ವೇಟಿಂಗ್‌ ಲಿಸ್ಟ್‌ನಲ್ಲಿದ್ದ ಪ್ರಯಾಣಿಕರಿಗೆ ಟಿಕೆಟ್‌ ಸಿಗದೇ ಇದ್ದರೆ ಪರ್ಯಾಯ ಪ್ರಯಾಣ ವ್ಯವಸ್ಥೆಗಳನ್ನು ಮಾಡಲು ಸಮಯ ಸಿಗಲಿದೆ.

ಜುಲೈ 1 ರಿಂದ 2025 ರಿಂದ ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲಿಸಿದ ಬಳಕೆದಾರರಿಗೆ ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುವುದು ಎಂದು ಭಾರತೀಯ ರೈಲ್ವೆ ಹೇಳಿದೆ.

ತಾತ್ಕಾಲ್ ಬುಕ್ಕಿಂಗ್‌ಗಳಿಗಾಗಿ ಒಟಿಪಿ ಆಧಾರಿತ ದೃಢೀಕರಣದ ಅನುಷ್ಠಾನವು ಜುಲೈ ಕೊನೆಯಿಂದ ಆರಂಭವಾಗಲಿದೆ. ಬಳಕೆದಾರರು ಆಧಾರ್ ಅಥವಾ ತಮ್ಮ ಡಿಜಿಲಾಕರ್ ಖಾತೆಗಳಲ್ಲಿ ಸಂಗ್ರಹವಾಗಿರುವ ಇತರ ಮಾನ್ಯ ಸರ್ಕಾರಿ ಗುರುತಿನ ದಾಖಲೆಗಳನ್ನು ಬಳಸಿಕೊಂಡು ತಮ್ಮ ಗುರುತನ್ನು ಪರಿಶೀಲಿಸಬೇಕಾಗುತ್ತದೆ.

ಈ ಹಿಂದೆ ಆಧಾರ್-ಪ್ರಮಾಣೀಕೃತ ಬಳಕೆದಾರರು ಮಾತ್ರ ಜುಲೈ 1 ರಿಂದ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಿಸಿತ್ತು.

ಸೆಪ್ಟೆಂಬರ್‌ ವೇಳೆ ಪ್ರಯಾಣಿಕರ ಹೊಸ ರಿಸರ್ವೇಷನ್‌ ವ್ಯವಸ್ಥೆ ಜಾರಿಗೆ ಬರಲಿದೆ. ಸದ್ಯ ಪ್ರತಿ ನಿಮಿಷಕ್ಕೆ 32 ಸಾವಿರ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದು. ಆದರೆ ವೆಬ್‌ಸೈಟ್‌ ನವೀಕರಣಗೊಳಿಸಿದ ಬಳಿಕ ಪ್ರತಿ ನಿಮಿಷಕ್ಕೆ 1.50 ಲಕ್ಷ ಟಿಕೆಟ್‌ ಬುಕ್‌ ಮಾಡುವಂತೆ ಅಪ್‌ಗ್ರೇಡ್‌ ಮಾಡಲಾಗುತ್ತದೆ. ಅಷ್ಟೇ ಅಲ್ಲದೇ ಬಹು ಭಾಷೆಗಳನ್ನು ಬೆಂಬಲಿಸುವ ಬಳಕೆದಾರ ಸ್ನೇಹಿ ಇಂಟರ್ಫೇಸ್ ಇರಲಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago