Featured

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಆನ್‌ಲೈನ್‌ ಪಾಸ್‌  – vishwanews24

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಆನ್‌ಲೈನ್‌ ಪಾಸ್‌

ಬೆಂಗಳೂರು: ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಪಾಸ್‌ಗಳನ್ನು ಆನ್‌ಲೈನ್‌ ಮೂಲಕವೇ ವಿತರಿಸಲಿದ್ದು, ಕ್ಯುಆರ್‌ ಕೋಡ್‌ ಮೂಲಕ ಪಾಸ್‌ಗಳನ್ನು ದೃಢೀಕರಿಸಿಕೊಂಡು ಪ್ರವೇಶ ಕಲ್ಪಿಸಲು ಸರಕಾರ ನಿರ್ಧರಿಸಿದೆ. ಗೃಹ ಸಚಿವ ಡಾ| ಪರಮೇಶ್ವರ ಈ ಹೊಸ ನಿಯಮ ಜಾರಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಧಾನಸೌಧದ ಪ್ರವೇಶದ್ವಾರ ಗಳಲ್ಲಿ ಹೊಸದಾಗಿ ಅಳವಡಿಸಿರುವ ಮೆಟಲ್‌ ಡಿಟೆಕ್ಟರ್‌, ಬ್ಯಾಗ್‌ ಸ್ಕ್ಯಾನರ್‌ಗಳನ್ನು ಶುಕ್ರವಾರ ಪರಿಶೀಲಿಸಿ ಅವರು ಈ ವಿಷಯ ತಿಳಿಸಿದರು.

ಆನ್‌ಲೈನ್‌ ಮೂಲಕವೇ ನೀಡಲಾಗುವುದು. ಆನ್‌ಲೈನ್‌ ಮೂಲಕ ಪಡೆದ ಕ್ಯುಆರ್‌ ಕೋಡ್‌ ಪಾಸ್‌ಗಳನ್ನು ಪರಿಶೀಲಿಸಲಾಗುತ್ತದೆ. ಗುಣ ಮಟ್ಟದ ಉಪಕರಣ ಅಳವಡಿಸಿರುವುದರಿಂದ, ಅನುಮಾನಾಸ್ಪದ ವಸ್ತುಗಳನ್ನು ತೆಗೆದು ಕೊಂಡು ಬಂದರೆ, ಪತ್ತೆಹಚ್ಚಲು ಸುಲಭವಾಗುತ್ತದೆ ಎಂದರು.

ವಿಧಾನಸೌಧದ ಭದ್ರತೆಯಲ್ಲಿ ಮತ್ತಷ್ಟು ಮಾರ್ಪಾಡು ತರಲಾಗುವುದು ಎಂದು ಮಾಹಿತಿ ನೀಡಿದ ಗೃಹ ಸಚಿವರು, ಸಾರ್ವಜನಿಕರು ಪೂರ್ವ ಭಾಗದ ಗೇಟಿನಿಂದ ಬರಬೇಕು. ಪಶ್ಚಿಮ ದ್ವಾರದಿಂದ ಗಣ್ಯರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಧಾನಸೌಧಕ್ಕೆ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಬೇಕು ಎಂಬ ವಿಷಯವಾಗಿ ನಗರ ಪೊಲೀಸ್‌ ಆಯುಕ್ತರೊಂದಿಗೆ ಚರ್ಚಿಸಲಾಗಿದೆ ಎಂದರು.

ಈ ಎರಡು ಕಟ್ಟಡಗಳಲ್ಲಿರುವ ಜನಪ್ರತಿನಿಧಿಗಳು, ಸರಕಾರಿ ಅಧಿಕಾರಿಗಳ ಭೇಟಿಗೆ ಅಪರಾಹ್ನ 2.30ರಿಂದ ಸಂಜೆ 5.30ರ ವರೆಗೆ ಸಮಯ ನಿಗದಿಪಡಿಸಲಾಗಿದೆ. ಅದೇ ಅವಧಿಯಲ್ಲಿ ಆನ್‌ಲೈನ್‌ ಮೂಲಕ ಸಾರ್ವಜನಿಕರು ಪ್ರವೇಶ ಪಾಸು ಪಡೆದು ಭೇಟಿ ಮಾಡಬಹುದಾಗಿದೆ.

ಪಾಸ್‌ ಹೇಗೆ ಸಿಗುತ್ತದೆ?
-ಪಾಸ್‌ ಬಯಸುವವರು ಆಯಂಡ್ರಾಯ್ಡ ಮೊಬೈಲ್‌ನಲ್ಲಿ ಕರ್ನಾಟಕ ಒನ್‌ ಆಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು.
-ತಮ್ಮ ಮೊಬೈಲ್‌ ಸಂಖ್ಯೆ ನೋಂದಾಯಿಸಿ, ಒಟಿಪಿ ದಾಖಲಿಸಿ, ಆಯಪ್‌ ತೆರೆಯಬೇಕು.
-ತಮ್ಮ ಹೆಸರು, ವಿಳಾಸ, ಆಧಾರ್‌ ಸಂಖ್ಯೆ ಮತ್ತಿ ತರ ಮಾಹಿತಿ ಭರ್ತಿ ಮಾಡಬೇಕು.
-ಅನಂತರ ವಿಧಾನಸೌಧ ಅಥವಾ ವಿಕಾಸಸೌಧ ವನ್ನು ಆಯ್ಕೆ ಮಾಡಿಕೊಳ್ಳಬೇಕು.
-ಅಧಿಕಾರಿಗಳು ದಾಖಲೆ ಪರಿಶೀಲಿಸಿ, ಕ್ಯುಆರ್‌ ಕೋಡ್‌ ಸ್ಕ್ಯಾನರ್‌ ಲಿಂಕ್‌ ಕಳುಹಿಸುತ್ತಾರೆ.
-ಈ ಲಿಂಕನ್ನು ಪೊಲೀಸ್‌ ಭದ್ರತ ಸಿಬಂದಿ ಸ್ಕ್ಯಾನ್‌ ಮಾಡುತ್ತಾರೆ. ಇಲ್ಲಿ ಯಶಸ್ವಿಯಾದರೆ ಪ್ರವೇಶ ಲಭ್ಯ. ಇಲ್ಲವಾದರೆ ನಿರ್ಬಂಧ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

56 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

1 hour ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

1 hour ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago