Featured

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಆನ್‌ಲೈನ್‌ ಪಾಸ್‌  – vishwanews24

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಆನ್‌ಲೈನ್‌ ಪಾಸ್‌

ಬೆಂಗಳೂರು: ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಪಾಸ್‌ಗಳನ್ನು ಆನ್‌ಲೈನ್‌ ಮೂಲಕವೇ ವಿತರಿಸಲಿದ್ದು, ಕ್ಯುಆರ್‌ ಕೋಡ್‌ ಮೂಲಕ ಪಾಸ್‌ಗಳನ್ನು ದೃಢೀಕರಿಸಿಕೊಂಡು ಪ್ರವೇಶ ಕಲ್ಪಿಸಲು ಸರಕಾರ ನಿರ್ಧರಿಸಿದೆ. ಗೃಹ ಸಚಿವ ಡಾ| ಪರಮೇಶ್ವರ ಈ ಹೊಸ ನಿಯಮ ಜಾರಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಧಾನಸೌಧದ ಪ್ರವೇಶದ್ವಾರ ಗಳಲ್ಲಿ ಹೊಸದಾಗಿ ಅಳವಡಿಸಿರುವ ಮೆಟಲ್‌ ಡಿಟೆಕ್ಟರ್‌, ಬ್ಯಾಗ್‌ ಸ್ಕ್ಯಾನರ್‌ಗಳನ್ನು ಶುಕ್ರವಾರ ಪರಿಶೀಲಿಸಿ ಅವರು ಈ ವಿಷಯ ತಿಳಿಸಿದರು.

ಆನ್‌ಲೈನ್‌ ಮೂಲಕವೇ ನೀಡಲಾಗುವುದು. ಆನ್‌ಲೈನ್‌ ಮೂಲಕ ಪಡೆದ ಕ್ಯುಆರ್‌ ಕೋಡ್‌ ಪಾಸ್‌ಗಳನ್ನು ಪರಿಶೀಲಿಸಲಾಗುತ್ತದೆ. ಗುಣ ಮಟ್ಟದ ಉಪಕರಣ ಅಳವಡಿಸಿರುವುದರಿಂದ, ಅನುಮಾನಾಸ್ಪದ ವಸ್ತುಗಳನ್ನು ತೆಗೆದು ಕೊಂಡು ಬಂದರೆ, ಪತ್ತೆಹಚ್ಚಲು ಸುಲಭವಾಗುತ್ತದೆ ಎಂದರು.

ವಿಧಾನಸೌಧದ ಭದ್ರತೆಯಲ್ಲಿ ಮತ್ತಷ್ಟು ಮಾರ್ಪಾಡು ತರಲಾಗುವುದು ಎಂದು ಮಾಹಿತಿ ನೀಡಿದ ಗೃಹ ಸಚಿವರು, ಸಾರ್ವಜನಿಕರು ಪೂರ್ವ ಭಾಗದ ಗೇಟಿನಿಂದ ಬರಬೇಕು. ಪಶ್ಚಿಮ ದ್ವಾರದಿಂದ ಗಣ್ಯರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಧಾನಸೌಧಕ್ಕೆ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಬೇಕು ಎಂಬ ವಿಷಯವಾಗಿ ನಗರ ಪೊಲೀಸ್‌ ಆಯುಕ್ತರೊಂದಿಗೆ ಚರ್ಚಿಸಲಾಗಿದೆ ಎಂದರು.

ಈ ಎರಡು ಕಟ್ಟಡಗಳಲ್ಲಿರುವ ಜನಪ್ರತಿನಿಧಿಗಳು, ಸರಕಾರಿ ಅಧಿಕಾರಿಗಳ ಭೇಟಿಗೆ ಅಪರಾಹ್ನ 2.30ರಿಂದ ಸಂಜೆ 5.30ರ ವರೆಗೆ ಸಮಯ ನಿಗದಿಪಡಿಸಲಾಗಿದೆ. ಅದೇ ಅವಧಿಯಲ್ಲಿ ಆನ್‌ಲೈನ್‌ ಮೂಲಕ ಸಾರ್ವಜನಿಕರು ಪ್ರವೇಶ ಪಾಸು ಪಡೆದು ಭೇಟಿ ಮಾಡಬಹುದಾಗಿದೆ.

ಪಾಸ್‌ ಹೇಗೆ ಸಿಗುತ್ತದೆ?
-ಪಾಸ್‌ ಬಯಸುವವರು ಆಯಂಡ್ರಾಯ್ಡ ಮೊಬೈಲ್‌ನಲ್ಲಿ ಕರ್ನಾಟಕ ಒನ್‌ ಆಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು.
-ತಮ್ಮ ಮೊಬೈಲ್‌ ಸಂಖ್ಯೆ ನೋಂದಾಯಿಸಿ, ಒಟಿಪಿ ದಾಖಲಿಸಿ, ಆಯಪ್‌ ತೆರೆಯಬೇಕು.
-ತಮ್ಮ ಹೆಸರು, ವಿಳಾಸ, ಆಧಾರ್‌ ಸಂಖ್ಯೆ ಮತ್ತಿ ತರ ಮಾಹಿತಿ ಭರ್ತಿ ಮಾಡಬೇಕು.
-ಅನಂತರ ವಿಧಾನಸೌಧ ಅಥವಾ ವಿಕಾಸಸೌಧ ವನ್ನು ಆಯ್ಕೆ ಮಾಡಿಕೊಳ್ಳಬೇಕು.
-ಅಧಿಕಾರಿಗಳು ದಾಖಲೆ ಪರಿಶೀಲಿಸಿ, ಕ್ಯುಆರ್‌ ಕೋಡ್‌ ಸ್ಕ್ಯಾನರ್‌ ಲಿಂಕ್‌ ಕಳುಹಿಸುತ್ತಾರೆ.
-ಈ ಲಿಂಕನ್ನು ಪೊಲೀಸ್‌ ಭದ್ರತ ಸಿಬಂದಿ ಸ್ಕ್ಯಾನ್‌ ಮಾಡುತ್ತಾರೆ. ಇಲ್ಲಿ ಯಶಸ್ವಿಯಾದರೆ ಪ್ರವೇಶ ಲಭ್ಯ. ಇಲ್ಲವಾದರೆ ನಿರ್ಬಂಧ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago