ಸೌದಿ ಅರೇಬಿಯಾ: ಹಜ್ ಯಾತ್ರೆ ಕೈಗೊಳ್ಳಬೇಕೆಂಬ ಕನಸಿರುವ ಮಹಿಳೆಯರಿಗೆ ಸೌದಿ ಅರೇಬಿಯಾ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಸೌದಿ ಅರೇಬಿಯಾದಲ್ಲಿ ಮಹಿಳೆಯರು ಮೆಹ್ರಾಮ್(ಪುರುಷ ಒಡನಾಡಿ) ಇಲ್ಲದೆಯೇ ಹಜ್ ಅಥವಾ ಉಮ್ರಾ ಯಾತ್ರೆ ಕೈಗೊಳ್ಳಬಹುದು..
ಸೌದಿಯ ಹಜ್ ಮತ್ತು ಉಮ್ರಾ ಸೇವೆಗಳ ಸಲಹೆಗಾರ ಅಹ್ಮದ್ ಸಲೇಹ್ ಹಲಾಬಿ ಅವರು ಈ ಘೋಷಣೆ ಮಾಡಿದ್ದಾರೆ. ಅದರಂತೆ, ಇನ್ನು ಪುರುಷ ಒಡನಾಡಿಯಿಲ್ಲದೆ, ಮಹಿಳೆಯರು ಯಾತ್ರೆ ಕೈಗೊಳ್ಳಬಹುದು. ಯಾತ್ರೆಗೆಂದು ಬರುವ ಎಲ್ಲ ಮಹಿಳೆಯರಿಗೂ ಪೂರ್ಣ ಪ್ರಮಾಣದಲ್ಲಿ ಸುರಕ್ಷತೆ ಒದಗಿಸುವ ಉದ್ದೇಶದಿಂದ ಎಲ್ಲ ಮಾದರಿಯ ಸಾರಿಗೆ ವ್ಯವಸೆœಗಳು, ಬಂದರುಗಳು ಸೇರಿದಂತೆ ಸೌದಿ ಅರೇಬಿಯಾದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ಈ ಮೂಲಕ, ಮಹಿಳೆಯರಿಗೆ ಹಜ್ ಯಾತ್ರೆ ಕೈಗೊಳ್ಳಲು ಮೆಹ್ರಾಮ್ನ ಅಗತ್ಯವಿದೆಯೇ ಎಂಬ ಚರ್ಚೆಗೆ ಸೌದಿ ಸರ್ಕಾರ ತೆರೆ ಎಳೆದಿದೆ. ಬೆಂಗಳೂರು: ಮದುವೆಯ ಭರವಸೆ ನೀಡಿ ಯುವತಿಯ ಮತಾಂತರ.. ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಎಫ್ಐಆರ್ ದಾಖಲು- Vishwanews24
ಕೆಲವು ಮಹಿಳೆಯರು ಕಠಿಣವಾದ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯಲ್ಲಿ ಬದುಕುತ್ತಿರುತ್ತಾರೆ. ಜೀವನದಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿರುತ್ತಾರೆ. ಅಂಥವರಿಗೆ ಪುರುಷ ಒಡನಾಡಿಯೊಂದಿಗೆ ಯಾತ್ರೆ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಕೆಲವರಿಗೆ ಮೆಹ್ರಾಮ್ನನ್ನು ಹುಡುಕುವುದು ಕಷ್ಟವಾದರೆ, ಇನ್ನು ಕೆಲವರಿಗೆ ಪುರುಷ ಒಡನಾಡಿಯೊಂದಿಗೆ ಯಾತ್ರೆ ಕೈಗೊಳ್ಳುವುದು ದುಬಾರಿಯಾಗುತ್ತದೆ. ಇದೆಲ್ಲವನ್ನು ಮನಗಂಡು ಇಂಥ ನಿರ್ಧಾರ ಕೈಗೊಂಡಿದ್ದೇವೆ ಎಂದೂ ಅಹ್ಮದ್ ಹಲಾಬಿ ತಿಳಿಸಿದ್ದಾರೆ. ಭಾರತದಲ್ಲಿ 2019ರಿಂದಲೇ ಮೆಹ್ರಾಮ್ ಇಲ್ಲದೇ ಮಹಿಳೆಯರಿಗೆ ಹಜ್ ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ – Vishwanews24
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…