ಸೌದಿ ಅರೇಬಿಯಾ: ಹಜ್ ಯಾತ್ರೆ ಕೈಗೊಳ್ಳಬೇಕೆಂಬ ಕನಸಿರುವ ಮಹಿಳೆಯರಿಗೆ ಸೌದಿ ಅರೇಬಿಯಾ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಸೌದಿ ಅರೇಬಿಯಾದಲ್ಲಿ ಮಹಿಳೆಯರು ಮೆಹ್ರಾಮ್(ಪುರುಷ ಒಡನಾಡಿ) ಇಲ್ಲದೆಯೇ ಹಜ್ ಅಥವಾ ಉಮ್ರಾ ಯಾತ್ರೆ ಕೈಗೊಳ್ಳಬಹುದು..
ಸೌದಿಯ ಹಜ್ ಮತ್ತು ಉಮ್ರಾ ಸೇವೆಗಳ ಸಲಹೆಗಾರ ಅಹ್ಮದ್ ಸಲೇಹ್ ಹಲಾಬಿ ಅವರು ಈ ಘೋಷಣೆ ಮಾಡಿದ್ದಾರೆ. ಅದರಂತೆ, ಇನ್ನು ಪುರುಷ ಒಡನಾಡಿಯಿಲ್ಲದೆ, ಮಹಿಳೆಯರು ಯಾತ್ರೆ ಕೈಗೊಳ್ಳಬಹುದು. ಯಾತ್ರೆಗೆಂದು ಬರುವ ಎಲ್ಲ ಮಹಿಳೆಯರಿಗೂ ಪೂರ್ಣ ಪ್ರಮಾಣದಲ್ಲಿ ಸುರಕ್ಷತೆ ಒದಗಿಸುವ ಉದ್ದೇಶದಿಂದ ಎಲ್ಲ ಮಾದರಿಯ ಸಾರಿಗೆ ವ್ಯವಸೆœಗಳು, ಬಂದರುಗಳು ಸೇರಿದಂತೆ ಸೌದಿ ಅರೇಬಿಯಾದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ಈ ಮೂಲಕ, ಮಹಿಳೆಯರಿಗೆ ಹಜ್ ಯಾತ್ರೆ ಕೈಗೊಳ್ಳಲು ಮೆಹ್ರಾಮ್ನ ಅಗತ್ಯವಿದೆಯೇ ಎಂಬ ಚರ್ಚೆಗೆ ಸೌದಿ ಸರ್ಕಾರ ತೆರೆ ಎಳೆದಿದೆ. ಬೆಂಗಳೂರು: ಮದುವೆಯ ಭರವಸೆ ನೀಡಿ ಯುವತಿಯ ಮತಾಂತರ.. ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಎಫ್ಐಆರ್ ದಾಖಲು- Vishwanews24
ಕೆಲವು ಮಹಿಳೆಯರು ಕಠಿಣವಾದ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯಲ್ಲಿ ಬದುಕುತ್ತಿರುತ್ತಾರೆ. ಜೀವನದಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿರುತ್ತಾರೆ. ಅಂಥವರಿಗೆ ಪುರುಷ ಒಡನಾಡಿಯೊಂದಿಗೆ ಯಾತ್ರೆ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಕೆಲವರಿಗೆ ಮೆಹ್ರಾಮ್ನನ್ನು ಹುಡುಕುವುದು ಕಷ್ಟವಾದರೆ, ಇನ್ನು ಕೆಲವರಿಗೆ ಪುರುಷ ಒಡನಾಡಿಯೊಂದಿಗೆ ಯಾತ್ರೆ ಕೈಗೊಳ್ಳುವುದು ದುಬಾರಿಯಾಗುತ್ತದೆ. ಇದೆಲ್ಲವನ್ನು ಮನಗಂಡು ಇಂಥ ನಿರ್ಧಾರ ಕೈಗೊಂಡಿದ್ದೇವೆ ಎಂದೂ ಅಹ್ಮದ್ ಹಲಾಬಿ ತಿಳಿಸಿದ್ದಾರೆ. ಭಾರತದಲ್ಲಿ 2019ರಿಂದಲೇ ಮೆಹ್ರಾಮ್ ಇಲ್ಲದೇ ಮಹಿಳೆಯರಿಗೆ ಹಜ್ ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…