ಮಂಗಳೂರು: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ.
ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ ಹೆಚ್ಚಿಸಬೇಕೆಂಬ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ.
ಮುಂದಿನ ಕೆಲವೇ ದಿನಗಳಲ್ಲಿ ವಾರದಲ್ಲಿ 6 ದಿನ ಮಂಗಳೂರು-ಬೆಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ.
ರೈಲು ಸಂಖ್ಯೆ 16585/586 ಬೆಂಗಳೂರು- ಮಂಗಳೂರು ರೈಲಿನ ಸಂಚಾರವನ್ನು ಹೆಚ್ಚಿಸಲು ನೈಋತ್ಯ ರೈಲ್ವೆ ಜುಲೈ 27 ರಂದು ರೈಲ್ವೇ ಮಂಡಳಿಗೆ ಪತ್ರ ಬರೆದಿತ್ತು.
ಈ ಪತ್ರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಸಚಿವಾಲಯವು ಆಗಸ್ಟ್ 17 ರಂದು ರೈಲು ಸಂಖ್ಯೆ 06547/548 ರ ಬೆಂಗಳೂರು-ಮಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲಿನ ಸೇವೆಗಳನ್ನು ಕ್ರಮಬದ್ಧಗೊಳಿಸುವ ಮೂಲಕ ರೈಲು ಸಂಚಾರವನ್ನು ವಾರಕ್ಕೆ ಆರು ದಿನಗಳವರೆಗೆ ಹೆಚ್ಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ.
ಇದೇ ವೇಳೆ 16585/586 ಬೆಂಗಳೂರು- ಮಂಗಳೂರು ರೈಲಿನ ಟರ್ಮಿನಲ್ ಸದ್ಯ ಇರುವ ಕೆಎಸ್ಆರ್ಅಂದರೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಸಿಟಿ ಜಂಕ್ಷನ್ನಿಂದ ಎಸ್ಎಂವಿಬಿ ಅಂದರೆ ಸರ್ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೈಯಪ್ಪನ ಹಳ್ಳಿಗೆ ವಿಸ್ತರಿಸಲಾಗಿದೆ.
ಟರ್ಮಿನಲ್ ಬದಲಾವಣೆ ಆಗಿದ್ದರೂ ಬೆಂಗಳೂರು ಸಿಟಿ, ಕಂಟೋನ್ಮೆಂಟ್, ಸಿಟಿ ಮತ್ತು ಕೆಂಗೇರಿ ಸೇರಿದಂತೆ ಈ ಹಿಂದಿನ ಮಾರ್ಗದಲ್ಲಿಯೇ ಸಂಚರಿಸಲಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…