ಮಂಗಳೂರು: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ.
ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ ಹೆಚ್ಚಿಸಬೇಕೆಂಬ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ.
ಮುಂದಿನ ಕೆಲವೇ ದಿನಗಳಲ್ಲಿ ವಾರದಲ್ಲಿ 6 ದಿನ ಮಂಗಳೂರು-ಬೆಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ.
ರೈಲು ಸಂಖ್ಯೆ 16585/586 ಬೆಂಗಳೂರು- ಮಂಗಳೂರು ರೈಲಿನ ಸಂಚಾರವನ್ನು ಹೆಚ್ಚಿಸಲು ನೈಋತ್ಯ ರೈಲ್ವೆ ಜುಲೈ 27 ರಂದು ರೈಲ್ವೇ ಮಂಡಳಿಗೆ ಪತ್ರ ಬರೆದಿತ್ತು.
ಈ ಪತ್ರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಸಚಿವಾಲಯವು ಆಗಸ್ಟ್ 17 ರಂದು ರೈಲು ಸಂಖ್ಯೆ 06547/548 ರ ಬೆಂಗಳೂರು-ಮಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲಿನ ಸೇವೆಗಳನ್ನು ಕ್ರಮಬದ್ಧಗೊಳಿಸುವ ಮೂಲಕ ರೈಲು ಸಂಚಾರವನ್ನು ವಾರಕ್ಕೆ ಆರು ದಿನಗಳವರೆಗೆ ಹೆಚ್ಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ.
ಇದೇ ವೇಳೆ 16585/586 ಬೆಂಗಳೂರು- ಮಂಗಳೂರು ರೈಲಿನ ಟರ್ಮಿನಲ್ ಸದ್ಯ ಇರುವ ಕೆಎಸ್ಆರ್ಅಂದರೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಸಿಟಿ ಜಂಕ್ಷನ್ನಿಂದ ಎಸ್ಎಂವಿಬಿ ಅಂದರೆ ಸರ್ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೈಯಪ್ಪನ ಹಳ್ಳಿಗೆ ವಿಸ್ತರಿಸಲಾಗಿದೆ.
ಟರ್ಮಿನಲ್ ಬದಲಾವಣೆ ಆಗಿದ್ದರೂ ಬೆಂಗಳೂರು ಸಿಟಿ, ಕಂಟೋನ್ಮೆಂಟ್, ಸಿಟಿ ಮತ್ತು ಕೆಂಗೇರಿ ಸೇರಿದಂತೆ ಈ ಹಿಂದಿನ ಮಾರ್ಗದಲ್ಲಿಯೇ ಸಂಚರಿಸಲಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…