ಮಂಗಳೂರು: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ.
ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ ಹೆಚ್ಚಿಸಬೇಕೆಂಬ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ.
ಮುಂದಿನ ಕೆಲವೇ ದಿನಗಳಲ್ಲಿ ವಾರದಲ್ಲಿ 6 ದಿನ ಮಂಗಳೂರು-ಬೆಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ.
ರೈಲು ಸಂಖ್ಯೆ 16585/586 ಬೆಂಗಳೂರು- ಮಂಗಳೂರು ರೈಲಿನ ಸಂಚಾರವನ್ನು ಹೆಚ್ಚಿಸಲು ನೈಋತ್ಯ ರೈಲ್ವೆ ಜುಲೈ 27 ರಂದು ರೈಲ್ವೇ ಮಂಡಳಿಗೆ ಪತ್ರ ಬರೆದಿತ್ತು.
ಈ ಪತ್ರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಸಚಿವಾಲಯವು ಆಗಸ್ಟ್ 17 ರಂದು ರೈಲು ಸಂಖ್ಯೆ 06547/548 ರ ಬೆಂಗಳೂರು-ಮಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲಿನ ಸೇವೆಗಳನ್ನು ಕ್ರಮಬದ್ಧಗೊಳಿಸುವ ಮೂಲಕ ರೈಲು ಸಂಚಾರವನ್ನು ವಾರಕ್ಕೆ ಆರು ದಿನಗಳವರೆಗೆ ಹೆಚ್ಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ.
ಇದೇ ವೇಳೆ 16585/586 ಬೆಂಗಳೂರು- ಮಂಗಳೂರು ರೈಲಿನ ಟರ್ಮಿನಲ್ ಸದ್ಯ ಇರುವ ಕೆಎಸ್ಆರ್ಅಂದರೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಸಿಟಿ ಜಂಕ್ಷನ್ನಿಂದ ಎಸ್ಎಂವಿಬಿ ಅಂದರೆ ಸರ್ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೈಯಪ್ಪನ ಹಳ್ಳಿಗೆ ವಿಸ್ತರಿಸಲಾಗಿದೆ.
ಟರ್ಮಿನಲ್ ಬದಲಾವಣೆ ಆಗಿದ್ದರೂ ಬೆಂಗಳೂರು ಸಿಟಿ, ಕಂಟೋನ್ಮೆಂಟ್, ಸಿಟಿ ಮತ್ತು ಕೆಂಗೇರಿ ಸೇರಿದಂತೆ ಈ ಹಿಂದಿನ ಮಾರ್ಗದಲ್ಲಿಯೇ ಸಂಚರಿಸಲಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…