Featured

ಇನ್ನೂ ನಿಂತಿಲ್ಲ ಕನ್ನಡಿಗರ ಮೇಲಿನ ತಮಿಳರ ಅಟ್ಟಹಾಸ, ಟಾರ್ಚರ್ ತಾಳಲಾರದೆ ಯುವಕ ಆತ್ಮಹತ್ಯೆಗೆ ಶರಣು

ಹಾಸನ: ತಮಿಳುನಾಡು ಮೂಲದ ಕಂಪನಿಯೊಂದರಲ್ಲಿ ಕನ್ನಡಿಗರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಯುವಕ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಾಸನ ನಗರದ ಬಸಟ್ಟಿಕೊಪ್ಪಲಿನಲ್ಲಿ ಈ ಘಟನೆ ನಡೆದಿದ್ದು, ಸೇವಾರ್ಥ್ ಆತ್ಮಹತ್ಯೆಗೆ ಶರಣಾದ ಯುವಕ. ನಗರದ ಪಿಎಸ್‍ಆರ್ ಸಿಲ್ಕ್ ನಲ್ಲಿ ಸೇವಾರ್ಥ್ ಕೆಲಸ ಮಾಡುತ್ತಿದ್ದು, 8 ವರ್ಷಗಳಿಂದ ಇದೇ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸದ್ಯ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ತಲುಪಿದ್ದರು. ಈ ಹಿಂದೆ ಮೈಸೂರಿನ ಬ್ರಾಂಚ್‍ ನಲ್ಲಿದ್ದ ಸೇವಾರ್ಥ್‍ನನ್ನು ಇತ್ತೀಚೆಗೆ ಹಾಸನಕ್ಕೆ ವರ್ಗಾಯಿಸಿದ್ದರು.

ಈಗ ಮತ್ತೆ ಮಂಗಳೂರು ಬ್ರಾಂಚ್‍ಗೆ ವರ್ಗಾವಣೆ ಮಾಡಿದ್ದರು. ಕೇವಲ ಎರಡು ದಿನ ರಜೆ ತೆಗೆದುಕೊಂಡಿದ್ದಕ್ಕೆ ನನಗೆ ಕಿರುಕುಳ ನೀಡಿದ್ದಾರೆ. ನಾನು ಕನ್ನಡಿಗ ಎಂದು ನನಗೆ ಕಿರುಕುಳ ನೀಡುತ್ತಿದ್ದಾರೆ. ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನನಗೆ ಕಿರುಕುಳ ನೀಡಿರುವ ಮೂವರಿಗೆ ಶಿಕ್ಷೆಯಾಗಬೇಕು ಎಂದು ತನ್ನ ವಿಡಿಯೋದಲ್ಲಿ ಸೇವಾರ್ಥ್ ಆಗ್ರಹಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ:
ಸ್ನೇಹಿತರೆ ನಾನು ಕನ್ನಡಿಗನಾಗಿ ಮಾತನಾಡುತ್ತಿದ್ದೇನೆ. ನಮ್ಮ ಕನ್ನಡದಲ್ಲಿ ನಮಗೆ ಬದುಕಲು ರಕ್ಷಣೆ ಇಲ್ಲ. ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದೆ. ಆದರೆ ನಾನು 2 ದಿನ ಹುಷಾರಿಲ್ಲದ ಕಾರಣ ರಜೆ ಹಾಕಿದ್ದಕ್ಕೆ 15 ದಿನ ಡಿಸ್‍ಮಿಸ್ ಮಾಡಿದರು. ಮೈಸೂರಿನ ಬ್ಯಾಚಿನಲ್ಲಿ ಇಬ್ಬರು ಮತ್ತು ಹಾಸನದಲ್ಲಿ ಒಬ್ಬ ಈ ಮೂವರು ಕಿರುಕುಳ ನೀಡಿದ್ದಾರೆ. ಆದ್ದರಿಂದ ನಾನು ಸಾಯುತ್ತಿದ್ದೇನೆ. ನನ್ನ ಸಾವಿಗೆ ಈ ಮೂವರೇ ಕಾರಣರಾಗಿದ್ದಾರೆ. ಅವರ ವಿರುದ್ಧ ಹೋರಾಡಿ ಶಿಕ್ಷೆ ಕೊಡಿಸಿ, ನನ್ನ ಆತ್ಮಕ್ಕೆ ಶಾಂತಿ ಕೊಡಿಸಿ ಎಂದು ಸ್ನೇಹಿತರಲ್ಲಿ ಮತ್ತು ಕನ್ನಡಕ್ಕೆ ರಕ್ಷಣೆ ಕೊಡಿಸಿ ಎಂದು ಕರ್ನಾಟಕ ರಕ್ಷಣೆ ವೇದಿಕೆ ಬಳಿ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago