Featured

ಇನ್ನೂ ಪ್ರಮಾಣವಚನ ಸ್ವೀಕರಿಸದ ಪ್ರಜ್ವಲ್ ರೇವಣ್ಣ -Vishwanews24

ನವದೆಹಲಿ: ಲೋಕಸಭೆಯಲ್ಲಿ ರಾಜ್ಯದ ಸಂಸದರೆಲ್ಲ ಪ್ರಮಾಣವಚನ ಸ್ವೀಕರಿಸಿದ್ದರೂ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಾತ್ರ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ.

ಅವರು ಶುಭ ಗಳಿಗೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಪ್ರಜ್ವಲ್ ರೇವಣ್ಣ ಪ್ರಮಾಣವಚನ ಸ್ವೀಕರಿಸಿಲ್ಲ ಎನ್ನಲಾಗಿದೆ. ರಾಜ್ಯದ ಸಂಸದರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಕರೆಯಲಾಗಿದೆ. ಆದರೆ ಅವರು ಹಾಜರಾಗಿರಲಿಲ್ಲ.

ಪ್ರಜ್ವಲ್ ರೇವಣ್ಣ ಶುಕ್ರವಾರ 2.30 ರ ಬಳಿಕ ಪ್ರಮಾಣವಚನಕ್ಕೆ ಸಮಯ ನೀಡುವಂತೆ ಲೋಕಸಭೆ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಅವರು ಪ್ರಮಾಣವಚನ ಸ್ವೀಕರಿಸಿಲ್ಲ ಎಂದು ಹೇಳಲಾಗಿದ್ದರೂ, ಸಚಿವ ಹೆಚ್.ಡಿ.ರೇವಣ್ಣ ನಿಗದಿಪಡಿಸಿದ ಶುಭ ಮುಹೂರ್ತಕ್ಕಾಗಿ ಅವರು ಕಾಯುತ್ತಿದ್ದಾರೆ. ಶುಕ್ರವಾರ ಮಧ್ಯಾಹ್ನದ ಬಳಿಕ ಶುಭ ಮುಹೂರ್ತದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರ ನಿವಾಸದಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

14 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

14 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

14 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

15 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

15 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

15 hours ago