ನವದೆಹಲಿ: ಲೋಕಸಭೆಯಲ್ಲಿ ರಾಜ್ಯದ ಸಂಸದರೆಲ್ಲ ಪ್ರಮಾಣವಚನ ಸ್ವೀಕರಿಸಿದ್ದರೂ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಾತ್ರ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ.
ಅವರು ಶುಭ ಗಳಿಗೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಪ್ರಜ್ವಲ್ ರೇವಣ್ಣ ಪ್ರಮಾಣವಚನ ಸ್ವೀಕರಿಸಿಲ್ಲ ಎನ್ನಲಾಗಿದೆ. ರಾಜ್ಯದ ಸಂಸದರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಕರೆಯಲಾಗಿದೆ. ಆದರೆ ಅವರು ಹಾಜರಾಗಿರಲಿಲ್ಲ.
ಪ್ರಜ್ವಲ್ ರೇವಣ್ಣ ಶುಕ್ರವಾರ 2.30 ರ ಬಳಿಕ ಪ್ರಮಾಣವಚನಕ್ಕೆ ಸಮಯ ನೀಡುವಂತೆ ಲೋಕಸಭೆ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಅವರು ಪ್ರಮಾಣವಚನ ಸ್ವೀಕರಿಸಿಲ್ಲ ಎಂದು ಹೇಳಲಾಗಿದ್ದರೂ, ಸಚಿವ ಹೆಚ್.ಡಿ.ರೇವಣ್ಣ ನಿಗದಿಪಡಿಸಿದ ಶುಭ ಮುಹೂರ್ತಕ್ಕಾಗಿ ಅವರು ಕಾಯುತ್ತಿದ್ದಾರೆ. ಶುಕ್ರವಾರ ಮಧ್ಯಾಹ್ನದ ಬಳಿಕ ಶುಭ ಮುಹೂರ್ತದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರ ನಿವಾಸದಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…