Featured

ಇನ್ನೂ ಸಾವಿರಾರು ಕೇಸುಗಳನ್ನು ಹಾಕಿದರೂ ನನ್ನ ಹಿಂದುತ್ವದ ಧ್ವನಿಯನ್ನು ಯಾರಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ : ಪ್ರಮೋದ್ ಮುತಾಲಿಕ್ -Vishwanews24

ಬೆಂಗಳೂರು: ಭಯೋತ್ಪಾದನೆಯನ್ನೇ ಉಸಿರಾಡುತ್ತಿರುವ ಪಾಕಿಸ್ತಾನವನ್ನು ಸಾಕಿ, ಪೋಷಿಸಿರುವ ಕಾಂಗ್ರೆಸ್​ ಪಕ್ಷದ ಮೈಗೆ ಜಮ್ಮು ಕಾಶ್ಮೀರದಲ್ಲಿ ಸತ್ತಿರುವ 42 ಸಾವಿರ ಜನರ ರಕ್ತ ಅಂಟಿಕೊಂಡಿದೆ. ಆ ಪಾಪದಿಂದ ಕಾಂಗ್ರೆಸ್​ ಎಂದಿಗೂ ಮುಕ್ತಿ ಹೊಂದಲಾರದು ಎನ್ನುವ ಮೂಲಕ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಇಂದು ಹಿಂದುತ್ವದ ಕುರಿತು ಮಾತನಾಡಿರುವ ಪ್ರಮೋದ್ ಮುತಾಲಿಕ್, ಜಮ್ಮು ಕಾಶ್ಮೀರದಲ್ಲಿ ಸಾವನ್ನಪ್ಪಿದ 42,000 ಸೈನಿಕರು, ಪೊಲೀಸರು, ನಾಗರಿಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಅವರನ್ನು ಕೊಂದ ರಕ್ತ ಕಾಂಗ್ರೆಸ್​ ಮೈಗೆ ಅಂಟಿಕೊಂಡಿದೆ. ಅತ್ಯಂತ ಚಿಕ್ಕದಾಗಿರುವ ಪಾಕಿಸ್ತಾನವನ್ನು ಪೋಷಿಸಿ, ಬೆಳೆಸಿ ಕಾಂಗ್ರೆಸ್​ ಮಾಡಿರುವ ಅನಾಹುತ ಎಷ್ಟೆಂಬುದರ ಅರಿವು ಯಾರಿಗಾದರೂ ಇದೆಯಾ?

ಇಡೀ ದೇಶದಲ್ಲಿ ಭಯೋತ್ಪಾದನೆಯನ್ನು ಹುಟ್ಟುಹಾಕಿಸಿ, ಪೋಷಿಸಿದ ಕಾಂಗ್ರೆಸ್​ ಅನ್ನು ಬಗ್ಗುಬಡಿದು ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವುದರಿಂದ ಭಯೋತ್ಪಾದನಾ ಚಟುವಟಿಕೆ ಕಡಿಮೆಯಾಗಿದೆ. ಈ ಸಭೆಯಲ್ಲಿದ್ದವರು ಪಾಕಿಸ್ತಾನದತ್ತ ತಿರುಗಿ ಮೂತ್ರ ವಿಸರ್ಜನೆ ಮಾಡಿದರೂ ಪಾಕ್​ ಮುಳುಗಿ ಹೋಗುತ್ತದೆ. ಅಂತಹ ದೇಶ ನಮ್ಮ ದೇಶದ ವಿರುದ್ಧ ಷಡ್ಯಂತ್ರ ಮಾಡುತ್ತಿದೆ ಎಂದು ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ನಾನೇನು ರೇಪ್​ ಮಾಡಲಿಲ್ಲ, ವಂಚನೆ ಮಾಡಲಿಲ್ಲ, ಇಸ್ಪೀಟ್ ಆಡಲಿಲ್ಲ, ಖೋಟಾ ನೋಡು ಪ್ರಿಂಟ್ ಮಾಡಲಿಲ್ಲ. ಹಿಂದುತ್ವ, ಗೋಮಾತೆ ಹೆಸರು ಹೇಳಿದ್ದಕ್ಕೆ ನಿರ್ಲಜ್ಜ ರಾಜಕಾರಣಿಗಳು ನನ್ನ ವಿರುದ್ಧ 106 ಕೇಸುಗಳನ್ನು ಹಾಕಿದ್ದಾರೆ. ಇನ್ನೂ ಸಾವಿರಾರು ಕೇಸುಗಳನ್ನು ಹಾಕಿದರೂ ನನ್ನ ಹಿಂದುತ್ವದ ಧ್ವನಿಯನ್ನು ಯಾರಪ್ಪನಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ಮುತಾಲಿಕ್ ಗುಡುಗಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

4 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

5 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

6 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago