Featured

ಇನ್ನೂ ಸಾವಿರಾರು ಕೇಸುಗಳನ್ನು ಹಾಕಿದರೂ ನನ್ನ ಹಿಂದುತ್ವದ ಧ್ವನಿಯನ್ನು ಯಾರಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ : ಪ್ರಮೋದ್ ಮುತಾಲಿಕ್ -Vishwanews24

ಬೆಂಗಳೂರು: ಭಯೋತ್ಪಾದನೆಯನ್ನೇ ಉಸಿರಾಡುತ್ತಿರುವ ಪಾಕಿಸ್ತಾನವನ್ನು ಸಾಕಿ, ಪೋಷಿಸಿರುವ ಕಾಂಗ್ರೆಸ್​ ಪಕ್ಷದ ಮೈಗೆ ಜಮ್ಮು ಕಾಶ್ಮೀರದಲ್ಲಿ ಸತ್ತಿರುವ 42 ಸಾವಿರ ಜನರ ರಕ್ತ ಅಂಟಿಕೊಂಡಿದೆ. ಆ ಪಾಪದಿಂದ ಕಾಂಗ್ರೆಸ್​ ಎಂದಿಗೂ ಮುಕ್ತಿ ಹೊಂದಲಾರದು ಎನ್ನುವ ಮೂಲಕ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಇಂದು ಹಿಂದುತ್ವದ ಕುರಿತು ಮಾತನಾಡಿರುವ ಪ್ರಮೋದ್ ಮುತಾಲಿಕ್, ಜಮ್ಮು ಕಾಶ್ಮೀರದಲ್ಲಿ ಸಾವನ್ನಪ್ಪಿದ 42,000 ಸೈನಿಕರು, ಪೊಲೀಸರು, ನಾಗರಿಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಅವರನ್ನು ಕೊಂದ ರಕ್ತ ಕಾಂಗ್ರೆಸ್​ ಮೈಗೆ ಅಂಟಿಕೊಂಡಿದೆ. ಅತ್ಯಂತ ಚಿಕ್ಕದಾಗಿರುವ ಪಾಕಿಸ್ತಾನವನ್ನು ಪೋಷಿಸಿ, ಬೆಳೆಸಿ ಕಾಂಗ್ರೆಸ್​ ಮಾಡಿರುವ ಅನಾಹುತ ಎಷ್ಟೆಂಬುದರ ಅರಿವು ಯಾರಿಗಾದರೂ ಇದೆಯಾ?

ಇಡೀ ದೇಶದಲ್ಲಿ ಭಯೋತ್ಪಾದನೆಯನ್ನು ಹುಟ್ಟುಹಾಕಿಸಿ, ಪೋಷಿಸಿದ ಕಾಂಗ್ರೆಸ್​ ಅನ್ನು ಬಗ್ಗುಬಡಿದು ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವುದರಿಂದ ಭಯೋತ್ಪಾದನಾ ಚಟುವಟಿಕೆ ಕಡಿಮೆಯಾಗಿದೆ. ಈ ಸಭೆಯಲ್ಲಿದ್ದವರು ಪಾಕಿಸ್ತಾನದತ್ತ ತಿರುಗಿ ಮೂತ್ರ ವಿಸರ್ಜನೆ ಮಾಡಿದರೂ ಪಾಕ್​ ಮುಳುಗಿ ಹೋಗುತ್ತದೆ. ಅಂತಹ ದೇಶ ನಮ್ಮ ದೇಶದ ವಿರುದ್ಧ ಷಡ್ಯಂತ್ರ ಮಾಡುತ್ತಿದೆ ಎಂದು ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ನಾನೇನು ರೇಪ್​ ಮಾಡಲಿಲ್ಲ, ವಂಚನೆ ಮಾಡಲಿಲ್ಲ, ಇಸ್ಪೀಟ್ ಆಡಲಿಲ್ಲ, ಖೋಟಾ ನೋಡು ಪ್ರಿಂಟ್ ಮಾಡಲಿಲ್ಲ. ಹಿಂದುತ್ವ, ಗೋಮಾತೆ ಹೆಸರು ಹೇಳಿದ್ದಕ್ಕೆ ನಿರ್ಲಜ್ಜ ರಾಜಕಾರಣಿಗಳು ನನ್ನ ವಿರುದ್ಧ 106 ಕೇಸುಗಳನ್ನು ಹಾಕಿದ್ದಾರೆ. ಇನ್ನೂ ಸಾವಿರಾರು ಕೇಸುಗಳನ್ನು ಹಾಕಿದರೂ ನನ್ನ ಹಿಂದುತ್ವದ ಧ್ವನಿಯನ್ನು ಯಾರಪ್ಪನಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ಮುತಾಲಿಕ್ ಗುಡುಗಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

3 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

3 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

3 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

4 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

4 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

5 hours ago