Featured

ಇನ್ನೂ 10ವರ್ಷ ಪ್ರಧಾನಿ ಮೋದಿಯವರ ಆಡಳಿತ ಈ ದೇಶಕ್ಕೆ ಅವಶ್ಯಕವಾಗಿದೆ : ಸಚಿವ ಸೋಮಣ್ಣ -Vishwanews24

ಇನ್ನೂ 10ವರ್ಷ ಪ್ರಧಾನಿ ಮೋದಿಯವರ ಆಡಳಿತ ಈ ದೇಶಕ್ಕೆ ಅವಶ್ಯಕವಾಗಿದೆ : ಸಚಿವ ಸೋಮಣ್ಣ -Vishwanews24

ಹಾರೋಹಳ್ಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ನಾಯಕರ ಜನಪರ ಕೆಲಸಗಳನ್ನು ಮೆಚ್ಚಿಕೊಳ್ಳಬೇಕೇ ಹೊರತು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ವಸತಿ ಸಚಿವ ಸೋಮಣ್ಣ ಹೇಳಿದರು.

ಕನಕಪುರ ತಾಲೂಕಿನ ಮರಳವಾಡಿಯ ಗುತ್ತಲಹುಣಸೆ ಗ್ರಾಮದ ಮಹದೇಶ್ವರ ದೇಗುಲದಲ್ಲಿ ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, . ಯಾವ ಸಿಡಿಯೂ ಇಲ್ಲ ಎಲ್ಲಾ ಕಟ್ಟುಕತೆ. ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ. ಸಿಎಂ ಬಿಎಸ್‌ವೈ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

ಇನ್ನೂ 10 ವರ್ಷ ಮೋದಿ ಆಡಳಿತ ಬೇಕು..
ಪ್ರಧಾನಿ ಮೋದಿಯವರ ಆಡಳಿತ ಇನ್ನೂ 10ವರ್ಷ ಈ ದೇಶಕ್ಕೆ ಅವಶ್ಯಕವಾಗಿದೆ. ನಮ್ಮ ದೇಶವನ್ನು ಕಂಡು ನೆರೆಯ ರಾಷ್ಟ್ರಗಳು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಘನತೆ-ಗೌರವಗಳು ಜಾಗತಿಕ ಮಟ್ಟದಲ್ಲಿ ಹೆಚ್ಚಿದೆ. ದೇಶದಲ್ಲಿ ಬಡತನ ನಿರ್ಮೂಲನೆಯಾಗದೇ ಇರಬಹುದು. ಆದರೆ ಬಡತನವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. 2023ನೇ ಇಸವಿ ಹೊತ್ತಿಗೆ ದೇಶದ ಯಾವ ಪ್ರಜೆಯೂ ಸ್ವಂತ ಸೂರಿಲ್ಲದೆ ಇರಬಾರದೆಂಬ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಈಗಾಗಲೇ ಅಭಿವೃಧ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಜನಪರ ಕಾರ್ಯಗಳನ್ನು ಮೆಚ್ಚಿ ಮುಂದಿನ ಬಾರಿಯೂ ನಮ್ಮ ಸರಕಾರವನ್ನು ಜನರು ಅಧಿಕಾರಕ್ಕೆ ತರುತ್ತಾರೆ. ಸಾಮಾನ್ಯ ಜನರೂ ಕೂಡ ಮುಖ್ಯ ವಾಹಿನಿಗೆ ಬರಬೇಕು ಅಂತಹ ಕೆಲಸವನ್ನು ಮಾಡಲಾಗುತ್ತಿದೆ ಎಂದು ವಿ ಸೋಮಣ್ಣ ಹೇಳಿದರು.

ಹೆಜಮಾಡಿ ಮೀನುಗಾರಿಕ ಬಂದರು ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

 

 

 

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

5 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

7 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

7 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

7 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

8 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

8 hours ago