Featured

ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ – vishwanews24

ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌  ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಸರ್ಕಾರಿ ನೌಕರನ ಮೇಲೆ ಕೈ ಮಾಡಿದ್ದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ಹಾಗೆ ನಾವು ಮಾಡ್ತೀವಿ. ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು. ಸ್ಥಳೀಯ ಸಿಪಿಐ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎನ್ನುವುದನ್ನು‌ ಕೇಳಿದ್ದೆನೆ. ‌ಸ್ಥಳೀಯ ಸಿಪಿಐ ಗಮನಕ್ಕೂ ತರದೇ ಪೋಕ್ಸೋ ಕೇಸ್ ಮಾಡಿದ್ದಾರೆ. ಇದರ ಕುರಿತು ನಾನು ಗೃಹ ಸಚಿವರು ಹಾಗೂ ಡಿಜಿಯವರಿಗೂ ಮಾತನಾಡುತ್ತೆನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

2 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

2 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

3 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

3 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago