ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಸರ್ಕಾರಿ ನೌಕರನ ಮೇಲೆ ಕೈ ಮಾಡಿದ್ದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ಹಾಗೆ ನಾವು ಮಾಡ್ತೀವಿ. ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು. ಸ್ಥಳೀಯ ಸಿಪಿಐ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎನ್ನುವುದನ್ನು ಕೇಳಿದ್ದೆನೆ. ಸ್ಥಳೀಯ ಸಿಪಿಐ ಗಮನಕ್ಕೂ ತರದೇ ಪೋಕ್ಸೋ ಕೇಸ್ ಮಾಡಿದ್ದಾರೆ. ಇದರ ಕುರಿತು ನಾನು ಗೃಹ ಸಚಿವರು ಹಾಗೂ ಡಿಜಿಯವರಿಗೂ ಮಾತನಾಡುತ್ತೆನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…