ಬೆಂಗಳೂರು : ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವರು ತಿಳಿಸಿದರು.
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ವಿರೋಧ ಪಕ್ಷದವರಿಗೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ಹೇಳಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…