ಬೆಂಗಳೂರು: ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಚಂದ್ರಯಾನ-3 ರ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಇದೇ ವೇಳೆ ಮತ್ತೆರಡು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಜಾಗಕ್ಕೆ ಶಿವಶಕ್ತಿ ಎಂದು ಹಾಗೂ ಚಂದ್ರಯಾನ -2 ಪತನವಾದ ಜಾಗಕ್ಕೆ ತಿರಂಗ ಎಂಬ ಹೆಸರನ್ನು ಮೋದಿ ಇಟ್ಟಿದ್ದಾರೆ.
ಚಂದ್ರಯಾನ-3ರ ಯಶಸ್ಸಿನಿಂದಾಗಿ ಸ್ಥಳೀಯ ಉತ್ಪಾದನೆಗಳ ಶಕ್ತಿ ಪ್ರದರ್ಶನವಾಗಿದೆ. ಇದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಅಲ್ಲದೇ ಮಹಿಳಾ ವಿಜ್ಞಾನಿಗಳು ಚಂದ್ರಯಾನ-3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಚಂದ್ರಯಾನ-3 ಮಿಷನ್ನ ಯಶಸ್ಸಿನ ಬಳಿಕ ಖಾಸಗಿ ಬಾಹ್ಯಾಕಾಶ ಉಡಾವಣೆಗಳು ಮತ್ತು ಸಂಬಂಧಿತ ಉಪಗ್ರಹ ಆಧಾರಿತ ವ್ಯವಹಾರಗಳಲ್ಲಿ ಹೂಡಿಕೆಯನ್ನು ಉತ್ತೇಜಿಸಲಿದೆ. ಈ ಮೂಲಕ ಕೇಂದ್ರದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…