Featured

ಇನ್ಮುಂದೆ ಆ.23  ರಾಷ್ಟ್ರೀಯ ಬಾಹ್ಯಾಕಾಶ ದಿನ: ಮೋದಿ ಘೋಷಣೆ – Vishwanews24

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ  ಇನ್ಮುಂದೆ ಆ.23  ರಾಷ್ಟ್ರೀಯ ಬಾಹ್ಯಾಕಾಶ ದಿನ: ಮೋದಿ ಘೋಷಣೆ

ಬೆಂಗಳೂರು: ಚಂದ್ರಯಾನ-3  ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ  ಚಂದ್ರಯಾನ-3 ರ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಇದೇ ವೇಳೆ ಮತ್ತೆರಡು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಜಾಗಕ್ಕೆ ಶಿವಶಕ್ತಿ ಎಂದು ಹಾಗೂ ಚಂದ್ರಯಾನ -2 ಪತನವಾದ ಜಾಗಕ್ಕೆ ತಿರಂಗ ಎಂಬ ಹೆಸರನ್ನು ಮೋದಿ ಇಟ್ಟಿದ್ದಾರೆ.

ಚಂದ್ರಯಾನ-3ರ ಯಶಸ್ಸಿನಿಂದಾಗಿ ಸ್ಥಳೀಯ ಉತ್ಪಾದನೆಗಳ ಶಕ್ತಿ ಪ್ರದರ್ಶನವಾಗಿದೆ. ಇದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಅಲ್ಲದೇ ಮಹಿಳಾ ವಿಜ್ಞಾನಿಗಳು ಚಂದ್ರಯಾನ-3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಚಂದ್ರಯಾನ-3 ಮಿಷನ್‍ನ ಯಶಸ್ಸಿನ ಬಳಿಕ ಖಾಸಗಿ ಬಾಹ್ಯಾಕಾಶ ಉಡಾವಣೆಗಳು ಮತ್ತು ಸಂಬಂಧಿತ ಉಪಗ್ರಹ ಆಧಾರಿತ ವ್ಯವಹಾರಗಳಲ್ಲಿ ಹೂಡಿಕೆಯನ್ನು ಉತ್ತೇಜಿಸಲಿದೆ. ಈ ಮೂಲಕ ಕೇಂದ್ರದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago