ಇನ್ಮುಂದೆ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ`ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್’ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ -Vishwanews24

Featured, ರಾಜ್ಯ ನ್ಯೂಸ್

ಇನ್ಮುಂದೆ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ`ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್’ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ -Vishwanews24

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮೀಣಾ ಜನತೆಗೆ ತ್ವರಿತವಾಗಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಲಭ್ಯವಾಗುವ ಉದ್ದೇಶದಿಂದ ಈ ಕೂಡಲೇ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಕಡ್ಡಾಯವಾಗಿ ವಿತರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಬಾಪೂಜಿ ಸೇವಾ ಕೇಂದ್ರಗಳಲ್ಲಿ 10 ರೂ. ಶುಲ್ಕದೊಂದಿಗೆ ಆಯುಷ್ಮಾನ್-ಆರೋಗ್ಯ ಕರ್ನಾಟಕ ಮಾಹಿತಿ ಮುದ್ರಿತ ಕಾಗದವನ್ನು ವಿತರಿಸಲಾಗುವುದು. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಅಭಿಯಾನವನ್ನು ಆಯೋಜಿಸಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವಂತೆ ಕ್ರಮ ವಹಿಸಲು ಸರ್ಕಾರ ಸೂಚನೆ ನೀಡಿದೆ.