Featured

ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ – vishwanews24

ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್

ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜುಲೈ 1 ರಿಂದ ದೇಶದಲ್ಲಿ ಜಾರಿ ಆಗಿವೆ. ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಡಾ.ಪರಮೇಶ್ವರ್, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್​ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ.

ಕಾನ್ಸ್‌ಟೇಬಲ್​ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

5 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago