ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜುಲೈ 1 ರಿಂದ ದೇಶದಲ್ಲಿ ಜಾರಿ ಆಗಿವೆ. ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಡಾ.ಪರಮೇಶ್ವರ್, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ.
ಕಾನ್ಸ್ಟೇಬಲ್ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…