ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಂಯೋಜಿತ ಯೋಜನೆಯಾದ ಆಯುಷ್ಮಾನ್ ಮತ್ತು ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಗ್ರಾಮಪಂಚಾಯತಿಗಳಡಿಯಲ್ಲಿ ಬರುವ ಬಾಪೂಜಿ ಸೇವಾ ಕೇಂದ್ರಗಳಲ್ಲೇ ವಿತರಿಸುವಂತೆ ಸರ್ಕಾರ ಆದೇಶಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸುತ್ತಿರುವ ಆನ್ ಲೈನ್ ಸೇವೆ ಮೂಲಕವೇ ಕಾರ್ಡ್ ವಿತರಿಸುವಂತೆ ಸರ್ಕಾರ ಆದೇಶಿಸಿದೆ.
ಈ ಹಿಂದೆ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಕಾರ್ಡ್ ಪಡೆಯಬೇಕಾದರೆ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ದಾಖಲಾತಿಗಳನ್ನು ಸಲ್ಲಿಸಿ ಪಡೆಯಬೇಕಿತ್ತು. ಆದರೆ ಈಗ ಗ್ರಾಮೀಣ ಭಾಗದ ಜನರಿಗೆ ತ್ವರಿತವಾಗಿ ಕಾರ್ಡ್ ಲಭ್ಯವಾಗಲಿ ಎಂದು ಸರ್ಕಾರ ಈ ಆದೇಶ ಹೊರಡಿಸಿದೆ.
ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿಯಿಂದ ಬಿಪಿಎಲ್ ಕಾರ್ಡ್ 5 ಲಕ್ಷದ ವರೆಗೂ ಮತ್ತು ಎಪಿಲ್ ಕಾರ್ಡ್ದಾರರು 1.50 ಲಕ್ಷದವರೆಗೂ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. ಹಾಗಾಗಿ ಗ್ರಾಮೀಣ ಭಾಗದ ಜನರಿಗೆ ಈ ಕಾರ್ಡ್ ತ್ವರಿತಗತಿಯಲ್ಲಿ ಸಿಗಲೆಂದು ಸರ್ಕಾರ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲೇ ವಿತರಿಸುವಂತೆ ಆದೇಶಿಸಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…