Featured

ಇನ್ಮುಂದೆ ಭಾರತ ದೇಶದಲ್ಲಿ ವಲಸಿಗರು ವಾಸಿಸಲು ಅವಕಾಶ ಇಲ್ಲ : ಜೆಪಿ ನಡ್ಡಾ -Vishwanews24

ಬೋಕಾರೋ:ದೇಶದಲ್ಲಿ ಅಕ್ರಮ ವಲಸಿಗರು ವಾಸಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಹೇಳುವ ಮೂಲಕ ಎನ್ ಆರ್ ಸಿ(ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಇದೀಗ ಸಮಯ ಬಂದಿದ್ದು, ಇನ್ಮುಂದೆ ದೇಶದಲ್ಲಿ ವಲಸಿಗರು ವಾಸಿಸಲು ಅವಕಾಶ ಇಲ್ಲ. ವಲಸಿಗರು ದೇಶ ಬಿಟ್ಟು ಹೋಗಬೇಕು. ಹಿಂದೂಗಳು, ಜೈನರು, ಸಿಖ್ಖರು, ಕ್ರಿಶ್ಚಿಯನ್ ರಿಗೆ ಹೊರಗೆ ಕಿರುಕುಳ ನೀಡಲಾಗುತ್ತಿದೆ. ಭಾರತ ವಲಸಿಗರಿಗೆ ಆಶ್ರಯ ನೀಡಲಿದೆ. ಭಾರತ ಒಂದು ದೇಶವಾಗಿದೆ, ಅದು ಛತ್ರ ಅಲ್ಲ ಎಂದು ನಡ್ಡಾ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಡ್ಡಾ ಅವರು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ್ದು, ಪ್ರಧಾನಿ ನರೇಂದ್ರ ಮೋದಿಯ ಹೂಸ್ಟನ್ ಭೇಟಿ, ಭ್ರಷ್ಟಾಚಾರದ ವಿರುದ್ಧದ ಕೇಂದ್ರದ ಹೋರಾಟದ ಬಗ್ಗೆಯೂ ವಿವರಿಸಿದರು.

ಜಾರ್ಖಂಡ್ ನ ಬೋಕಾರೋದಲ್ಲಿ ಶುಕ್ರವಾರ ವಿಜಯ್ ಸಂಕಲ್ಪ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿ ಹೇಳಿದೆ. ಈ ಕಾರ್ಯಕ್ರಮದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago