Featured

ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ – Vishwanews24

ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ

ಬೆಂಗಳೂರು:  ಮೆಟ್ರೋ ಪ್ರಯಾಣಿಕರು ಸಂಚಾರ ಮುಗಿಸಿ ನಿಲ್ದಾಣದಿಂದ ಆಚೆ ಬಂದ್ರೆ ಹತ್ತಾರು ಆಟೋಗಳು ಕಾಣುತ್ತವೆ. ಆದರೆ ಕೆಲ ಆಟೋಗಳು ಕರೆದ ಕಡೆ ಬರಲ್ಲ, ಇನ್ನೂ ಕೆಲವರು ಕೇಳಿದ ರೇಟ್ ನೀಡೋಕೆ ಆಗಲ್ಲ. ಈ ಎಲ್ಲಾ ಸಮಸ್ಯೆಗೆ ಕೊನೆ ಕಾಣಿಸಲೇಬೇಕೆಂದು ನಮ್ಮ ಮೆಟ್ರೋ ನಿರ್ಧಾರ ಮಾಡಿದೆ..

ಹೀಗಾಗಿ ಮೆಟ್ರೋ ನಿಲ್ದಾಣದಲ್ಲೇ ಪ್ರಿಪೇಯ್ಡ್ ಆಟೋ ಸೇವೆ ಒದಗಿಸಲು ಮುಂದಾಗಿದೆ. ಟ್ರಾಫಿಕ್ ಪೊಲೀಸರ ಈ ಬಗ್ಗೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.

ಈ ಬಗ್ಗೆ ಇತ್ತೀಚಿನ ಸಭೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ ಅಧಿಕಾರಿಗಳು ಸಹ ಚರ್ಚೆ ನಡೆಸಿದರು. ಈ ವಿಚಾರವಾಗಿ ನಗರದ ಕೆಲ ನಿಲ್ದಾಣಗಳನ್ನು ಗುರುತು ಮಾಡಲಾಗಿದೆ. ಈ ಬಗ್ಗೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೇಜ್ ಕೂಡ ಬೆಂಗಳೂರು ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡರಿಗೆ ಪತ್ರ ಬರೆದಿದ್ದಾರೆ.

ಸದ್ಯ ಪೊಲೀಸ್ ಇಲಾಖೆ ಕೂಡ ಈ ಯೋಜನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗ್ತಿದೆ. ಎಲ್ಲಾವು ಸರಿ ಆದರೆ ಮುಂದಿನ ತಿಂಗಳೊಳಗೆ ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಬಳಿ ಪ್ರಿಪೇಯ್ಡ್ ಆಟೋ ಸೇವೆ ಆರಂಭಗೊಳ್ಳಲಿದೆ.

ಸುರತ್ಕಲ್‌: ವೀರ ಸಾವರ್ಕರ್‌ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು ಖಚಿತ : ಶಾಸಕ ಡಾ. ವೈ. ಭರತ್‌ ಶೆಟ್ಟಿ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago