Featured

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಯೂರಿಯಾದಂತಹ ರಸಗೊಬ್ಬರಗಳ ಅತಿಯಾದ ಬಳಕೆಗೆ ಕಡಿವಾಣ ಹಾಕಲು ಮತ್ತು ವೈಜ್ಞಾನಿಕ ಬಳಕೆಯನ್ನು ಉತ್ತೇಜಿಸಲು ರೈತರಿಗೆ ಫಾರ್ಮರ್ಸ್ ಐಡಿ ಹೊಂದುವುದನ್ನು ಕಡ್ಡಾಯಗೊಳಿಸಿದೆ.

ಈ ವರ್ಷದಿಂದ ಯೂರಿಯಾ, ಡಿಎಪಿ ಸೇರಿದಂತೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ ಎಫ್‌ಐಡಿ ಕಡ್ಡಾಯ. ಪ್ರತಿಯೊಬ್ಬ ರೈತರೂ ಎಫ್‌ಐಡಿಯನ್ನು ಮಾಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆ 20 ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದೆ.

ಏನು ಕೊರತೆ?

ಗೊಬ್ಬರ ತಯಾರಿಕೆಗೆ ಪ್ರಮುಖವಾಗಿ ನೈಸರ್ಗಿಕ ಅನಿಲ ಬೇಕಾಗುತ್ತದೆ. ಇದರೊಂದಿಗೆ ಇನ್ನುಳಿದ ಕಚ್ಚಾವಸ್ತುಗಳು ಬರುವುದು ಕತಾರ್, ಸೌದಿ ಅರೇಬಿಯಾ ಸೇರಿದಂತೆ ಮಧ್ಯಪ್ರಾಚ್ಯದ ದೇಶಗಳಿಂದ. ಅದರಲ್ಲೂ ಬಹುಪಾಲು ಕಚ್ಚಾ ವಸ್ತು ಹೋರ್ಮುಜ್ ಜಲಸಂಧಿ ಮಾರ್ಗದ ಮೂಲಕವೇ ಬರುತ್ತದೆ. ಸದ್ಯ ಹೋರ್ಮುಜ್ ಜಲಸಂಧಿ ಬಹುತೇಕ ಬಂದಾಗಿದ್ದು, ಕಚ್ಚಾ ವಸ್ತುಗಳು ಬರುತ್ತಿಲ್ಲ. ಸದ್ಯಕ್ಕೆ ಬೇಕಾಗುವಷ್ಟು ಕಚ್ಚಾ ವಸ್ತುಗಳ ದಾಸ್ತಾನಿದೆ ಎಂದು ಮೂಲಗಳು ತಿಳಿಸಿವೆ. ಆದರೂ ಸಹ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ರಸಗೊಬ್ಬರ ಖರೀದಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಎಫ್‌ಐಡಿ ಕಡ್ಡಾಯಗೊಳಿಸಿ ಕೃಷಿ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

8 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago